ಮುಂಬೈ: ದೇಶದಲ್ಲೇ ಹೆಚ್ಚಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಗಣೇಶ ಚತುರ್ಥಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಶಿಲ್ಪಾ ಶೆಟ್ಟಿ, ಸಲ್ಮಾನ್ ಖಾನ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಕೂಡಾ ತಮ್ಮ ಮನೆಗಳಿಗೆ ಗಣೇಶ ವಿಗ್ರಹ ತಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುತ್ತಾರೆ. ಗಣೇಶನ ಆಶೀರ್ವಾದ ಕೋರುವ ಹಬ್ಬದ ಉತ್ಸಾಹ ಹೆಚ್ಚಿಸುವ ತಾರೆಗಳಲ್ಲಿ ಶಾರುಖ್ ಖಾನ್ ಕೂಡ ಒಬ್ಬರು.
ಜವಾನ್ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಶಾರೂಖ್ ಖಾನ್ ತಮ್ಮ ಮನೆಗೆ ಗಣಪತಿ ಮೂರ್ತಿಯನ್ನು ತಂದಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ಗಣೇಶ ಮೂರ್ತಿ. ಚಿತ್ರವನ್ನು ಪೋಸ್ಟ್ ಮಾಡುವ ಮೂಲಕ ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
Advertisement