social_icon

ಮತಾಂತರಗೊಂಡಿದ್ದ 300 ಸಂತ್ರಸ್ತರಿಗೆ 'ದಿ ಕೇರಳ ಸ್ಟೋರಿ' ನಿರ್ಮಾಪಕರಿಂದ ಪುನರ್ವಸತಿಯ ಭರವಸೆ!

ಆಶ್ರಮವೊಂದರಲ್ಲಿ ಮತಾಂತರಗೊಂಡ 300 ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಉಪಕ್ರಮವನ್ನು 'ದಿ ಕೇರಳ ಸ್ಟೋರಿ' ಚಿತ್ರದ ನಿರ್ಮಾಪಕ ವಿಪುಲ್ ಶಾ ಬುಧವಾರ ಘೋಷಿಸಿದ್ದು, 51 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

Published: 17th May 2023 09:19 PM  |   Last Updated: 19th May 2023 07:12 PM   |  A+A-


The Kerala Story Film Poster

ದಿ ಕೇರಳ ಸ್ಟೋರಿ ಚಿತ್ರದ ಪೋಸ್ಟರ್

Posted By : Vishwanath S
Source : Online Desk

ಮುಂಬೈ: ಆಶ್ರಮವೊಂದರಲ್ಲಿ ಮತಾಂತರಗೊಂಡ 300 ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಉಪಕ್ರಮವನ್ನು 'ದಿ ಕೇರಳ ಸ್ಟೋರಿ' ಚಿತ್ರದ ನಿರ್ಮಾಪಕ ವಿಪುಲ್ ಶಾ ಬುಧವಾರ ಘೋಷಿಸಿದ್ದು, 51 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

'ದಿ ಕೇರಳ ಸ್ಟೋರಿ' ಮೇ 5ರಂದು ಬಿಡುಗಡೆಯಾಗಿದ್ದು, ಅಂದಿನಿಂದ ವಿವಾದಗಳಲ್ಲಿ ಸಿಲುಕಿಕೊಂಡಿದೆ. ಕೆಲವು ರಾಜ್ಯಗಳಲ್ಲಿ ಚಿತ್ರ ಪ್ರದರ್ಶನವನ್ನು ನಿಷೇಧಿಸಲಾಗಿದೆ. ಮತ್ತೆ ಇನ್ನು ಕೆಲ ರಾಜ್ಯಗಳಲ್ಲಿ ತೆರಿಗೆ ವಿನಾಯ್ತಿ ನೀಡಲಾಗಿದೆ.

ಸುದೀಪ್ತೋ ಸೇನ್ ನಿರ್ದೇಶನದ ಈ ಚಿತ್ರದಲ್ಲಿ ನಟಿ ಅದಾ ಶರ್ಮಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಮತಾಂತರದ ಸಂತ್ರಸ್ತರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಚಿತ್ರವನ್ನು ನಿರ್ಮಿಸಿದ್ದೇನೆ ಮತ್ತು ಅವರ ಉಪಕ್ರಮವು 'ಹೆಣ್ಣುಮಕ್ಕಳನ್ನು ರಕ್ಷಿಸಿ' ಆ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದು ಶಾ ಹೇಳಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 'ದಿ ಕೇರಳ ಸ್ಟೋರಿ'ಗೆ ನಿಷೇಧ: ಮೇ 12ರಂದು ನಿರ್ಮಾಪಕರ ಅರ್ಜಿ ಆಲಿಸಲು 'ಸುಪ್ರೀಂ' ಸಮ್ಮತಿ

ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕರು ಮಾತನಾಡಿ, ''ಕೇರಳ ಸ್ಟೋರಿ ಚಿತ್ರ ನಿರ್ಮಿಸಲು ಮತ್ತು ಸುದೀಪ್ತ ಈ ಕಥೆಯನ್ನು ಮುನ್ನೆಲೆಗೆ ತಂದು ಸಿನಿಮಾ ಮಾಡಲು ಮುಖ್ಯ ಕಾರಣ ಈ ಹೆಣ್ಣುಮಕ್ಕಳಿಗೆ ಸಹಾಯ ಮಾಡುವುದಾಗಿದೆ. ಆಶ್ರಮದಲ್ಲಿರುವ 300 ಹೆಣ್ಣು ಮಕ್ಕಳಿಗೆ ಪುನರ್ವಸತಿ ಕಲ್ಪಿಸುವ ಮೂಲಕ ನಾವು ಇದನ್ನು ಪ್ರಾರಂಭಿಸಲಿದ್ದೇವೆ. ನಾವು, 'ಸನ್‌ಶೈನ್ ಪಿಕ್ಚರ್ಸ್' ಮತ್ತು 'ದಿ ಕೇರಳ ಸ್ಟೋರಿ' ತಂಡವು ರೂ 51 ಲಕ್ಷ ದೇಣಿಗೆ ನೀಡುವ ಮೂಲಕ ಇದನ್ನು ಪ್ರಾರಂಭಿಸುತ್ತೇವೆ ಎಂದರು. 

'ದಿ ಕೇರಳ ಸ್ಟೋರಿ' ತಂಡದ ಜೊತೆಗೆ 26 ಮಂದಿ ಮತಾಂತರದ ಬಲಿಪಶುಗಳೂ ವೇದಿಕೆಯಲ್ಲಿ ಕಾಣಿಸಿಕೊಂಡರು.


Stay up to date on all the latest ಬಾಲಿವುಡ್ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp