ನಿತೇಶ್ ತಿವಾರಿ ರಾಮಾಯಣದಲ್ಲಿ ಶೂರ್ಪನಖಿಯಾಗಿ ರಾಕುಲ್ ಪ್ರೀತ್ ಸಿಂಗ್!

ನಿತೇಶ್ ತಿವಾರಿ ನಿರ್ದೇಶನದ ರಾಮಾಯಣದ ತಾರಾಗಣವು ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಈಗಾಗಲೇ ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್, ಸನ್ನಿ ಡಿಯೋಲ್ ಮತ್ತು ಲಾರಾ ದತ್ತಾ ಕ್ರಮವಾಗಿ ಭಗವಾನ್ ರಾಮ, ಸೀತಾ, ರಾವಣ, ಭಗವಾನ್ ಹನುಮಾನ್ ಮತ್ತು ಕೈಕೇಯಿಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ನಿತೇಶ್ ತಿವಾರಿ ರಾಮಾಯಣದಲ್ಲಿ ಶೂರ್ಪನಖಿಯಾಗಿ ರಾಕುಲ್ ಪ್ರೀತ್ ಸಿಂಗ್!
Updated on

ನಿತೇಶ್ ತಿವಾರಿ ನಿರ್ದೇಶನದ ರಾಮಾಯಣದ ತಾರಾಗಣವು ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಈಗಾಗಲೇ ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್, ಸನ್ನಿ ಡಿಯೋಲ್ ಮತ್ತು ಲಾರಾ ದತ್ತಾ ಕ್ರಮವಾಗಿ ಭಗವಾನ್ ರಾಮ, ಸೀತಾ, ರಾವಣ, ಭಗವಾನ್ ಹನುಮಾನ್ ಮತ್ತು ಕೈಕೇಯಿಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ ರಾಕುಲ್ ಪ್ರೀತ್ ಸಿಂಗ್ ರಾಮಾಯಣ ತಾರಾಗಣ ಸೇರುತ್ತಿದ್ದಾರೆ. ರಾಮಾಯಣದಲ್ಲಿ ರಾವಣನ ಸಹೋದರಿ ಶೂರ್ಪನಖಿ ಪಾತ್ರವನ್ನು ಮಾಡಲು ತಿವಾರಿ ರಾಕುಲ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪಿಂಕ್ವಿಲ್ಲಾ ವರದಿ ಮಾಡಿದೆ.

ಇದು ರಾಮಾಯಣದ ಹಾದಿಯನ್ನು ಬದಲಾಯಿಸುವ ಮತ್ತು ಭಗವಾನ್ ರಾಮ ಮತ್ತು ರಾವಣನನ್ನು ಮುಖಾಮುಖಿಯಾಗಿಸುವ ಶೂರ್ಪನಖಿ ಪಾತ್ರವಾಗಿದೆ. ಈ ಚಿತ್ರಕ್ಕಾಗಿ ರಾಕುಲ್ ಲುಕ್ ಟೆಸ್ಟ್ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮದುವೆಯ ನಂತರ ರಾಕುಲ್ ಶೂಟಿಂಗ್ ಮಾಡುವ ಮೊದಲ ಚಿತ್ರ ರಾಮಾಯಣವಾಗಲಿದೆ.

ನಿತೇಶ್ ತಿವಾರಿ ರಾಮಾಯಣದಲ್ಲಿ ಶೂರ್ಪನಖಿಯಾಗಿ ರಾಕುಲ್ ಪ್ರೀತ್ ಸಿಂಗ್!
ಬಹು ನಿರೀಕ್ಷಿತ 'ರಾಮಾಯಣ' ಸಿನಿಮಾಗೆ ಯಶ್ ನಿರ್ಮಾಪಕ!

ರಾಮಾಯಣ ಮಾರ್ಚ್ 2024 ರಲ್ಲಿ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿಯೊಂದಿಗೆ ಚಿತ್ರೀಕರಣವನ್ನು ಪ್ರಾರಂಭಿಸಿದೆ. ಸನ್ನಿ ಡಿಯೋಲ್ ತನ್ನ ಪಾತ್ರದ ಚಿತ್ರೀಕರಣವನ್ನು ಮೇ ತಿಂಗಳಲ್ಲಿ ಪ್ರಾರಂಭಿಸಲಿದ್ದು, ಜುಲೈನಲ್ಲಿ ಯಶ್ ಪಾತ್ರವರ್ಗಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

2025 ರ ದೀಪಾವಳಿ ಬಿಡುಗಡೆಯನ್ನು ಗುರಿಯಾಗಿಟ್ಟುಕೊಂಡು ಯಶ್ ಅವರ ದೃಶ್ಯಗಳನ್ನು ಪೂರ್ಣಗೊಳಿಸಿದ ನಂತರ ರಾಮಾಯಣ ಚಿತ್ರೀಕರಣವನ್ನು ಪೂರ್ಣಗೊಳಿಸಲು ತಂಡವು ಗುರಿ ಹೊಂದಿದೆ. ಚಲನಚಿತ್ರವನ್ನು ಮೂರು ಭಾಗಗಳ ಸರಣಿಯಾಗಿ ಬರಲಿದೆ.

ಕನ್ನಡದ ‘ಗಿಲ್ಲಿ’ ಚಿತ್ರದ ಮೂಲಕ ಬಣ್ಣದ ಹಚ್ಚಿದ ನಟಿ ರಕುಲ್ ತೆಲುಗು ಸಿನಿಮಾಗಳ ನಂತರ ಬಾಲಿವುಡ್‌ನಲ್ಲಿ ಸ್ಟಾರ್ ನಟರ ಜೊತೆ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡರು. ಇದೀಗ ರಾಮಾಯಣ ಸಿನಿಮಾದ ಆಫರ್ ಸಿಕ್ಕಾಗ ಸೂಕ್ತ ಅವಕಾಶ ಎನಿಸಿ ನಟಿ ಓಕೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com