

ಮುಂಬೈ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಸಿಜೆಪಿ ಹಾಗೂ ಶಿಕ್ಷಣತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರು ನಡೆಸುತ್ತಿರುವ "ಪ್ರತಿಭಟನೆ"ಗೆ ಬಾಲಿವುಡ್ ತಾರೆಯರಿಂದಲೂ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ, ನಟ ಸಲ್ಮಾನ್ ಖಾನ್, ನಟ ರಿತೇಶ್ ದೇಶಮುಖ್ ಹಾಗೂ ನಟಿ ಜೆನೆಲಿಯಾ ನಂತರ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಸಹ ಬೆಂಬಲ ವ್ಯಕ್ತಪಡಿಸಿದ್ದು, ಕಳೆದ ಕೆಲವು ದಿನಗಳಿಂದ ನನ್ನ ಹೃದಯ ಹೊಡೆದು ಚೂರಾಗಿದೆ ಎಂದು ಕಿಡಿ ಕಾರಿದ್ದಾರೆ.
ವಿದ್ಯಾರ್ಥಿಗಳಿಗೆ ಆಲಿಯಾ ಭಟ್ ಬೆಂಬಲ
ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿರುವ ಆಲಿಯಾ ಭಟ್, "ಕಳೆದ ಕೆಲವು ದಿನಗಳಿಂದ ನನ್ನ ಹೃದಯ ಹೊಡೆದಿದೆ ಮತ್ತು ಈ ಬೆಳವಣಿಗೆಗಳನ್ನು ನೋಡಿದರೆ ತುಂಬಾ ಬೇಸರವಾಗುತ್ತಿದೆ. ಆದರೆ ಈ ಪರಿಸ್ಥಿತಿ ವಿದ್ಯಾರ್ಥಿಗಳಲ್ಲಿ ಧೈರ್ಯ ಮತ್ತೆ ಭರವಸೆಯನ್ನೂ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಹಿಂದೆ ಒಂದು ಕನಸು, ಕುಟುಂಬದ ನಿರೀಕ್ಷೆ ಮತ್ತು ಹಲವು ವರ್ಷಗಳ ಶ್ರಮ ಇರುತ್ತದೆ. ಅವರು ತಮ್ಮ ಭವಿಷ್ಯಕ್ಕಾಗಿ ಮಾತ್ರವಲ್ಲ, ತಮ್ಮ ನಂತರ ಬರುವ ವಿದ್ಯಾರ್ಥಿಗಳಿಗೂ ಉತ್ತಮ ಭವಿಷ್ಯ ಸಿಗಲೆಂದು ಹೋರಾಟ ಮಾಡುತ್ತಿದ್ದಾರೆ ಎಂದು ಬರೆದಿದ್ದಾರೆ.
ವಿದ್ಯಾರ್ಥಿಗಳ ಧೈರ್ಯ ನನಗೆ ಪ್ರೇರಣೆ ನೀಡಿದೆ. ದೇಶದ ಭವಿಷ್ಯ ರೂಪಿಸುವ ಯುವಕರ ಮಾತನ್ನು ನಾವು ನಿಜವಾಗಿಯೂ ಕೇಳುತ್ತಿದ್ದೇವೆಯೇ ಎಂಬ ಪ್ರಶ್ನೆಯನ್ನು ಎಲ್ಲರೂ ಕೇಳಿಕೊಳ್ಳಬೇಕು. ಭವಿಷ್ಯ ಅವರದ್ದು. ಜೈ ಹಿಂದ್ʼ ಎಂದು ಆಲಿಯಾ ಭಟ್ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.