ಮಾತಿನ ಮನೆಯಲ್ಲಿ 'ಮಳೆ'

ಪ್ರೇಮ್ - ಅಮೂಲ್ಯ
ಪ್ರೇಮ್ - ಅಮೂಲ್ಯ

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್,ಚಂದ್ರು ಅವರು ನಿರ್ಮಿಸುತ್ತಿರುವ `ಮಳೆ' ಚಿತ್ರಕ್ಕೆ ಪ್ರಸಾದ್ ಸ್ಟುಡಿಯೋದಲ್ಲಿ  ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಚಿಕ್ಕಮಗಳೂರು, ಸಕಲೇಶಪುರ ಮುಂತಾದ ಕಡೆ `ಮಳೆ'ಗೆ ಚಿತ್ರೀಕರಣ ನಡೆದಿದೆ.

ನಿರ್ದೇಶಕ ಆರ್.ಚಂದ್ರು ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ತೇಜಸ್ ನಿರ್ದೇಶಿಸುತ್ತಿದ್ದಾರೆ. ಪ್ರೇಮ್(ನೆನಪಿರಲಿ) ಅವರು ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅಮೂಲ್ಯ. ಸುಜ್ಞಾನ್ ಛಾಯಾಗ್ರಹಣ, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ, ಮುರಳಿ, ಹರ್ಷ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ರವಿವರ್ಮ ಸಾಹಸ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾನಿರ್ದೇಶನ ಹಾಗೂ ಸುಧೀಂದ್ರ ಹೊಸಳ್ಳಿ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಕೆ.ಮುನೀಂದ್ರಪುರ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com