ಜೂನ್ 18ಕ್ಕೆ ಕನ್ನಡ ಚಿತ್ರರಂಗ ಬಂದ್

ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಚಿತ್ರ ನಿರ್ಮಾಪಕರು...
ನಿರ್ಮಾಪಕರ ಸಂಘದ ಪ್ರತಿಭಟನೆ
ನಿರ್ಮಾಪಕರ ಸಂಘದ ಪ್ರತಿಭಟನೆ

ಬೆಂಗಳೂರು: ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗುರುವಾರದಿಂದ (ಜೂನ್‌ 11) ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕನ್ನಡ ಚಿತ್ರ ನಿರ್ಮಾಪಕರು ಜೂನ್ 18ರಂದು ಚಿತ್ರರಂಗ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಈ ಸಂಬಂಧ ನಿನ್ನೆ ಸಂಜೆ ನಡೆದ ನಿರ್ಮಾಪಕರ ಸಂಘ ತುರ್ತು ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಒಂದು ವೇಳೆ ತಮ್ಮ ಬೇಡಿಕೆ ಈಡೇರಿಸದಿದ್ದರೆ ಜೂನ್ 18ರಂದು ಚಿತ್ರರಂಗಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ಸ್ಥಳಗೊಳಿಸಲು ನಿರ್ಧರಿಸಲಾಗಿದೆ.

ಈ ಮಧ್ಯೆ, ನಟ ಜಗ್ಗೇಶ್ ಅವರು ಜೂನ್ 15ರೊಳಗೆ ಒಂದು ತೀರ್ಮಾನಕ್ಕೆ ಬನ್ನಿ ಎಂದು ಕನ್ನಡ ಚಿತ್ರ ಕಲಾವಿದರ ಸಂಘ ಸಂಘಕ್ಕೆ ಪತ್ರ ಬರೆದಿದ್ದಾರೆ. ಅಲ್ಲದೆ ಅಲ್ಲಿಯವರೆಗೆ ಬಂದ್ ಮಾಡುವ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ನಿರ್ಮಾಪಕರಿಗೆ ಸಲಹೆ ನೀಡಿದ್ದಾರೆ.

ಈಗ ಚೆಂಡು ಕಲಾವಿದರ ಸಂಘದ ಕೈಯಲ್ಲಿದ್ದು, ಮುಂದಿನ ದಿನಗಳಲ್ಲಿ ನಟರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com