ದುನಿಯಾ ವಿಜಯ್ ಅಲಿಯಾಸ್ 'ಮುರುಗ'!

ಯೋಗರಾಜ್ ಭಟ್ ಅವರ ಮುಂದಿನ ಚಿತ್ರಕ್ಕಾಗಿ ಕಾಯುತ್ತಿರುವ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಮತ್ತೊಂದು ಸಿನಿ ಪ್ರಾಜೆಕ್ಟ್ ಗೆ ಸಹಿ ಹಾಕಿದ್ದಾರೆ.
ದುನಿಯಾ ವಿಜಯ್
ದುನಿಯಾ ವಿಜಯ್
Updated on

ಯೋಗರಾಜ್ ಭಟ್ ಅವರ ಮುಂದಿನ ಚಿತ್ರಕ್ಕಾಗಿ ಕಾಯುತ್ತಿರುವ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಮತ್ತೊಂದು ಸಿನಿ ಪ್ರಾಜೆಕ್ಟ್ ಗೆ ಸಹಿ ಹಾಕಿದ್ದಾರೆ.

ವಿಜಯ್ ನಾಯಕ ನಟನಾಗಿದ್ದ 'ಶಿವಾಜಿನಗರ' ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ಪಿ.ಏನ್ ಸತ್ಯ ಅವರೇ ವಿಜಯ್ ಅವರ ಮತ್ತೊಂದು ಚಿತ್ರವನ್ನು ನಿರ್ದೇಶಿಸಲಿದ್ದು ಈ ಚಿತ್ರಕ್ಕೆ ಮುರುಗ ಎಂದು ನಾಮಕರಣ ಮಾಡಲಾಗಿದೆ. 'ಶಿವಾಜಿನಗರ'ಕ್ಕೆ ಕೆಲಸ ಮಾಡಿದ್ದ ತಂತ್ರಜ್ಞರ ತಂಡ ಮುರುಗ ಚಿತ್ರಕ್ಕೂ ಕೆಲಸ ಮಾಡಲಿದೆ.

ಯೋಗರಾಜ್ ಭಟ್ರ ನಿರ್ದೇಶನದ ಚಿತ್ರದ ಜೊತೆಜೊತೆಗೇ ಮುರುಗ ಚಿತ್ರ ಚಿತ್ರೀಕರಣವೂ ನಡೆಯಲಿದೆ ಎಂದಿರುವ ದುನಿಯಾ ವಿಜಯ್, ಮುರುಗ ಚಿತ್ರವನ್ನು ಎಲ್ಲಾ ವರ್ಗದವರಿಗೂ ಇಷ್ಟವಾಗುವಂತೆ ಹೊರತರಲಾಗುವುದು ಎಂದು ಹೇಳಿದ್ದಾರೆ. ಯೋಗರಾಜ್ ಭಟ್ರು ಸಿನಿಮಾ ಚಿತ್ರಕಥೆಯಲ್ಲಿ ಬ್ಯುಸಿಯಾಗಿರುವುದರಿಂದ ಅವರೇ ತಮ್ಮ ನೂತನ ಚಿತ್ರದ ಬಗ್ಗೆ ಘೋಷಣೆ ಮಾಡುವವರೆಗೂ ಕಾಯುವುದಾಗಿ ದುನಿಯಾ ವಿಜಯ್ ತಿಳಿಸಿದ್ದಾರೆ. ಭಟ್ಟರೊಂದಿಗೆ ಸಿನಿಮಾ ಮಾಡುವುದಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿದೆ, ಆ ಅವಕಾಶ ಈಗ ಬಂದಿದ್ದು ಚಿತ್ರೀಕರಣ ಪ್ರಾರಂಭದ ಬಗ್ಗೆ ಯೋಗರಾಜ ಭಟ್ರೇ ಮಾಹಿತಿ ನೀಡಬೇಕು ಎಂದಿದ್ದಾರೆ.

ಆರ್. ಎಕ್ಸ್ ಸೂರಿ ಬಿಡುಗಡೆಯಾಗಲಿರುವ ತಮ್ಮ ಮುಂದಿನ ಚಿತ್ರವಾಗಿದ್ದು, ಪ್ರೇಕ್ಷಕರಲ್ಲಿ ಸಿನಿಮಾವನ್ನು ನೋಡುವ ವಿಧಾನ  ಬದಲಾಗುತ್ತಿದೆ ಎಂದು ದುನಿಯಾ ವಿಜಯ್ ಅಭಿಪ್ರಾಯಪಟ್ಟಿದ್ದಾರೆ. ದುನಿಯಾ ರೀತಿಯ ಮತ್ತೊಂದು ಪಾತ್ರವನ್ನು ನಿರ್ವಹಿಸುವುದು ಕಷ್ಟ. ದುನಿಯಾ ಪಾತ್ರ ತಮಗೆ ಅಪಾರ ಜನಪ್ರಿಯತೆ ತಂದುಕೊಟ್ಟಿದೆ. ಆ ಪಾತ್ರದ ಮರುಸೃಷ್ಟಿಯಲ್ಲಿ ತಮ್ಮ ಜನಪ್ರಿಯತೆಯನ್ನು ಕಳೆದುಕೊಳ್ಳಲು ಇಷ್ಟಪಡುವುದುಇಲ್ಲ ಎಂದು ವಿಜಯ್ ತಿಳಿಸಿದ್ದಾರೆ.

  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com