ಬುಧವಾರ ಹುಚ್ಚ ವೆಂಕಟ್ ಜೈಲಿನಿಂದ ಬಿಡುಗಡೆ?

ಹುಚ್ಚ ವೆಂಕಟ್ ಬಿಡುಗಡೆಗೆ ಅಗತ್ಯವಿರುವ ಶ್ಯೂರಿಟಿ ಸಲ್ಲಿಸುವುದಾಗಿ ಹೇಳಿರುವುದರಿಂದ ಬುಧವಾರ ಹುಚ್ಚ ವೆಂಕಟ್‌ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ...
ಹುಚ್ಚ ವೆಂಕಟ್
ಹುಚ್ಚ ವೆಂಕಟ್

ಬೆಂಗಳೂರು:  ಒಕ್ಕಲಿಗರ ಹಿತಕರಕ್ಷಣಾ ಸೇನೆಯ ಅಧ್ಯಕ್ಷರು ಹುಚ್ಚ ವೆಂಕಟ್ ಬಿಡುಗಡೆಗೆ ಅಗತ್ಯವಿರುವ ಶ್ಯೂರಿಟಿ ಸಲ್ಲಿಸುವುದಾಗಿ ಹೇಳಿರುವುದರಿಂದ ಬುಧವಾರ ಹುಚ್ಚ ವೆಂಕಟ್‌ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ನವೆಂಬರ್ 25ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವೆಂಕಟ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ಶ್ಯೂರಿಟಿ ಸಲ್ಲಿಸದಿರುವ ಕಾರಣ ಅವರು ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಒಕ್ಕಲಿಗರ ಹಿತಕರಕ್ಷಣಾ ಸೇನೆಯ ಅಧ್ಯಕ್ಷರಾದ ಮಂಜೇಗೌಡ ಅವರು, 'ವೆಂಕಟ್‌ಗೆ ಶ್ಯೂರಿಟಿ ನೀಡುತ್ತೇನೆ, ಬುಧವಾರ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ, ವೆಂಕಟ್ ಅವರನ್ನು ಬಿಡುಗಡೆ ಮಾಡಿಸುತ್ತೇನೆ' ಎಂದು ಹೇಳಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆ ಪೊಲೀಸರು ವೆಂಕಟ್‌ನನ್ನು ನವೆಂಬರ್ 19ರಂದು ಬಂಧಿಸಿದ್ದರು. ಮೊದಲು ವೆಂಕಟ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಸದ್ಯ, ಕೋರ್ಟ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com