ಬೆಂಗಳೂರು: ವಿಶ್ವದೆಲ್ಲೆಡೆ ಹಲವು ಅಂತಾರಾಷ್ಟ್ರೀಯ ಸಿನೆಮೋತ್ಸವಗಳಲ್ಲಿ ಪ್ರಶಸ್ತಿ ಗಳಿಸಿ, ರಾಷ್ಟ್ರ ಪ್ರಶಸ್ತಿ ಕೂಡ ಗೆದ್ದ 'ತಿಥಿ' ಕನ್ನಡ ಚಿತ್ರರಂಗಕ್ಕೆ ಗೌರವ ತಂದುಕೊಟ್ಟ ಚಿತ್ರ. ಈ ಚಿತ್ರದಲ್ಲಿ ನಟಿಸಿದ್ದ ವೃತ್ತಿಪರ ನಟರಲ್ಲದ ಗ್ರಾಮಸ್ಥರು ಕರ್ನಾಟಕದ ಮನೆಮಾತಾಗಿದ್ದರು. ಇದೆ ನಟರನ್ನು ನಿಯೋಜಿಸಿಕೊಂಡು ತೆರೆಕಂಡ 'ತರ್ಲೆ ವಿಲೇಜ್' ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಆ ಮುಗ್ಧ ಗ್ರಾಮಸ್ಥರನ್ನು 'ತರ್ಲೆ ವಿಲ್ಲೇಜ್' ಸಿನೆಮಾದಲ್ಲಿ ಕೆಟ್ಟದಾಗಿ ಚಿತ್ರಿಸಿದ್ದಾರೆ ಎಂದು 'ತಿಥಿ' ಸಿನೆಮಾದ ಕಥಾ ರಚನಕಾರ-ಸಂಭಾಷಣಕಾರ ಈರೇ ಗೌಡ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.