ಕಬ್ಬನ್ ಪಾರ್ಕ್ ನಲ್ಲಿ 'ಇಷ್ಟಕಾಮ್ಯ'

ನಾಗತಿಹಳ್ಳಿ ಚಂದ್ರಶೇಖರ್ ನಿರ್ಸೇಶನದ 'ಇಷ್ಟಕಾಮ್ಯ' ಚಿತ್ರತಂಡ ಭಾನುವಾರ ಕಬ್ಬನ್ ಪಾರ್ಕ್ ಅನ್ನು ಸಿನೆಮಾ ಸೆಟ್ ಆಗಿ ಪರಿವರ್ತಿಸಿತ್ತು. ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರಿಯಾ,
'ಇಷ್ಟಕಾಮ್ಯ' ಚಿತ್ರೀಕರಣದಲ್ಲಿ ವಿಜಯ್ ಸೂರಿಯಾ, ಮಯೂರಿ ಮತ್ತು ಕಾವ್ಯ ಶೆಟ್ಟಿ
'ಇಷ್ಟಕಾಮ್ಯ' ಚಿತ್ರೀಕರಣದಲ್ಲಿ ವಿಜಯ್ ಸೂರಿಯಾ, ಮಯೂರಿ ಮತ್ತು ಕಾವ್ಯ ಶೆಟ್ಟಿ
Updated on

ಬೆಂಗಳೂರು: ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಇಷ್ಟಕಾಮ್ಯ' ಚಿತ್ರತಂಡ ಭಾನುವಾರ ಕಬ್ಬನ್ ಪಾರ್ಕ್ ಅನ್ನು ಸಿನೆಮಾ ಸೆಟ್ ಆಗಿ ಪರಿವರ್ತಿಸಿತ್ತು. ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರಿಯಾ, ಮಯೂರಿ ಮತ್ತು ಕಾವ್ಯ ಶೆಟ್ಟಿ ಅವರನ್ನು ಒಳಗೊಂಡ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಯಿತು.

ಸುಧೀರ್ಘ ಸಮಯದ ವಿರಾಮದ ನಂತರ ಮತ್ತೆ ಹಿಂದಿರುಗಿರುವ ನಿರ್ದೇಶಕ ನಾಗತಿಹಳ್ಳಿ ಈ ಬಾರಿ ವಿಶಿಷ್ಟ ಪ್ರೇಮಕಥೆಯನ್ನು ಆಯ್ದುಕೊಂಡಿದ್ದಾರಂತೆ. ಸಿನೆಮಾದ ಪೋಸ್ಟರ್ ಅನ್ನು ನಟ-ನಿರ್ದೇಶಕ-ಪರಿಸರವಾದಿ ಸುರೇಶ್ ಹೆಬ್ಳಿಕರ್ ಶನಿವಾರ ಬಿಡುಗಡೆ ಮಾಡಿದ್ದಾರೆ. ಕನ್ನಡದ ಮೇರು ಸಾಹಿತಿ ಕುವೆಂಪು ಅವರ ಕನವವೊಂದನ್ನು ಕೂಡ ಸಿನೆಮಾದಲ್ಲಿ ಉಪಯೋಗಿಸುತ್ತಿರುವುದು ಚಿತ್ರದ ಮುಖ್ಯಾಂಶಗಳಲ್ಲೊಂದು.

ಈ ಸಿನೆಮಾವನ್ನು ಶಂಕರೇ ಗೌಡ ನಿರ್ಮಿಸುತ್ತಿದ್ದು, ರವಿಕುಮಾರ್ ಸಾನಾ ಸಿನೆಮ್ಯಾಟೋಗ್ರಾಫರ್. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಬಿ ಜಯಶ್ರೀ, ಮಂಡ್ಯ ರಮೇಶ್, ಸುಮನ್ ನಗರ್ಕರ್, ಚಿಕ್ಕಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com