ನನ್ನ ನಿರ್ದೇಶನದ ಶಂಕರಾಭರಣಂ ಚಿತ್ರದ ಕನ್ನಡ ರಿಮೇಕ್ ರೈಟ್ಸ್ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಸದ್ಯದಲ್ಲೇ ಈ ಸಿನಿಮಾ ಸೆಟ್ಟೇರಲಿದ್ದು, ಈ ಚಿತ್ರದ ಮೂಲಕ ಸ್ಟಾರ್ ನಟನ ಪುತ್ರನೊಬ್ಬನನ್ನು ಲಾಂಚ್ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ವೆಂಕಟ್ ಹೇಳಿಕೊಂಡಿದ್ದಾರೆ. ಅಂದಹಾಗೆ, ಈ ಚಿತ್ರದಲ್ಲಿ ನಟಿಸಲಿರುವ ಸ್ಟಾರ್ ನಟನ ಪುತ್ರ ಯಾರೆಂಬ ಕುತೂಹಲವೂ ಇಲ್ಲಿ ತಣಿದಿದೆ. ಬೇರಾರೂ ಅಲ್ಲ, ಅದು ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಎಂಬ ಮಾ ತು ಕೇಳಿಬರುತ್ತಿದೆ. ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದಲ್ಲಿ ರಣಧೀರ ಸಟ್ಟೇರಿತ್ತು. ಆದರೆ, ಆ ಸಿನಿಮಾ ಸದ್ಯಕ್ಕೆ ಸ್ಟಾಪ್ ಆಗಿದ್ದು, ಟೇಕಾಫ್ ಆಗುವುದು ಯಾವಾಗ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ.