ಶಿವರಾಜ್ ಕುಮಾರ್ ಗಾಗಿ ಸಂತೋಷ್ ಥಿಯೇಟರ್ ನಿಂದ ಮಾಸ್ಟರ್ ಪೀಸ್ ಎತ್ತಂಗಡಿ!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಶಿವಲಿಂಗ ಚಿತ್ರವನ್ನು ಸಂತೋಷ್ ಚಿತ್ರಮಂದಿರದಲ್ಲಿ ರಿಲೀಸ್ ಮಾಡುವ ಸಲುವಾಗಿ ಮಾಸ್ಟರ್ ಪೀಸ್ ಚಿತ್ರವನ್ನು ಎತ್ತಂಗಡಿ
ಶಿವರಾಜ್ ಕುಮಾರ್ ಮತ್ತು ಯಶ್
ಶಿವರಾಜ್ ಕುಮಾರ್ ಮತ್ತು ಯಶ್
Updated on

ಬೆಂಗಳೂರು: ಇತ್ತೀಚೆಗೆ ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರ ಸಖತ್ ಹಿಟ್ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಜೊತೆಗೆ ಹಿಂದಿನ ಎಲ್ಲಾ ಚಿತ್ರಗಳ ದಾಖಲೆಗಳನ್ನು ಗಾಳಿಗೆ ತೂರಿ ಹೆಚ್ಚು ಹಣ ಗಳಿಸಿದೆ.

ಮಾಸ್ಟರ್ ಪೀಸ್ ಚಿತ್ರ 50 ನೇ ದಿನಕ್ಕಾಗಿ ಯಶ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.

ಆದರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್  ಅವರ ಶಿವಲಿಂಗ ಚಿತ್ರವನ್ನು ಸಂತೋಷ್ ಚಿತ್ರಮಂದಿರದಲ್ಲಿ ರಿಲೀಸ್ ಮಾಡುವ ಸಲುವಾಗಿ ಮಾಸ್ಟರ್ ಪೀಸ್  ಚಿತ್ರವನ್ನು ಎತ್ತಂಗಡಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತದೆ.

ಇದು ಯಶ್ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಇದರಿಂದ ಮುಂದಿನ ದಿನದಲ್ಲಿ ಮತ್ತೊಂದು ಸ್ಟಾರ್ ವಾರ್ ಗೆ ಕಾರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com