ವಿನಯ್ ರಾಜಕುಮಾರ್ ನಟಿಸಿರುವ, ವಜ್ರೇಶ್ವರಿ ಕಂಬೈನ್ಸ್ ನಿರ್ಮಾಣದ ಈ ಚಿತ್ರದ ನಿರ್ದೇಶಕ ಈ ಹಿಂದೆ ಮುಂಬೈನಲ್ಲಿ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರೊಂದಿಗೆ ಕೆಲಸ ಮಾಡಿರುವುದಾಗಿ ತಿಳಿಸುತ್ತಾರೆ. "ನಾನು ಮೂರನೇ ತರಗತಿಯಲ್ಲೇ ಮನೆ ತೊರೆದೆ. ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಬೆಳೆದ ನಾನು ಬಹಳಷ್ಟು ಪ್ರಯಾಣ ಮಾಡಿ ಸಾಕಷ್ಟು ಜನರನ್ನು ಭೇಟಿ ಮಾಡಿದ್ದೇನೆ. ನಾನು ಕಂಡಿರುವ, ಜೀವಿಸಿರುವ ಕಥೆಗಳು ಅನುಭವಗಳು ಒಳ್ಳೆಯ ಸಿನೆಮಾ ಮಾಡಲು ಸಾಕಲ್ಲವೇ" ಎನ್ನುತ್ತಾರೆ.