ನಟ ಸುದೀಪ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು: ಹೆಬ್ಬುಲಿ ಚಿತ್ರೀಕರಣ ಸ್ಧಗಿತ

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಹೆಬ್ಬುಲಿ ಚಿತ್ರದ ಚಿತ್ರೀಕರಣ ಸ್ಧಗಿತಗೊಂಡಿದೆ...
ಕಿಚ್ಚ ಸುದೀಪ್
ಕಿಚ್ಚ ಸುದೀಪ್
Updated on

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಹೆಬ್ಬುಲಿ ಚಿತ್ರದ ಚಿತ್ರೀಕರಣ ಸ್ಧಗಿತಗೊಂಡಿದೆ.

ಸುದೀಪ್ ಅಸಿಡಿಟಿ, ಜ್ವರದಿಂದ ಬಳಲುತ್ತಿದ್ದು ನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಜಕೇಸರಿ ಖ್ಯಾತಿಯ ಕೃಷ್ಣ ನಿರ್ದೇಶನದ ಹೆಬ್ಬಲಿ ಚಿತ್ರದ ಶೂಟಿಂಗ್ ನಲ್ಲಿ ಸುದೀಪ್ ಬ್ಯುಸಿಯಾಗಿದ್ದು, ಅನಾರೋಗ್ಯದ ಹಿನ್ನೆಲೆ ಚಿತ್ರೀಕರಣ ಸ್ಧಗಿತಗೊಳಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುದೀಪ್ ಅವರು ಅಭಿಮಾನಿಗಳು ಗಾಬರಿಪಡಬೇಕಾಗಿಲ್ಲ ಎಂದು ವಿನಂತಿಸಿಕೊಂಡಿರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com