ಸರ್ವಣ ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಶುಭರಕ್ಷ ಎದುರು 'ಬೆಂಕಿಪಟ್ಣ' ಖ್ಯಾತಿಯ ಪ್ರತಾಪ್ ನಾರಾಯಣ್ ನಟಿಸಲಿದ್ದಾರೆ. ಈಗಿನ ಸವಾಲುಗಳು ತಾವು ತಮ್ಮ ವೃತ್ತಿಜೀವನದ ಮೊದಲಭಾಗದಲ್ಲಿ ಎದುರಿಸಿದ ಸವಾಲಿನಷ್ಟು ಕಷ್ಟವಲ್ಲ ಎನ್ನುವ ಶುಭರಕ್ಷ "ಎರಡು ಸಿನೆಮಾಗಳು ಮಧ್ಯದಲ್ಲೇ ನಿಂತುಹೋದವು. 'ಗುಡುಗು' ಚೆನ್ನಾಗಿ ಮೂಡಿ ಬಂದಿರುವುದಕ್ಕೆ ಖುಷಿಯಿದೆ. ಮಾತುಕತೆಯ ಭಾಗದ ಚಿತ್ರೀಕರಣ ನುಗಿದಿದ್ದು, ಹಾಡುಗಳ ಚಿತ್ರೀಕರಣ ಆಗಸ್ಟ್ ನಲ್ಲಿ ಪ್ರಾರಂಭವಾಗಲಿದೆ. ನಾನು ಮತ್ತೊಂದು ಸಿನೆಮಾಗೆ ಸಹಿ ಹಾಕಿದ್ದೇನೆ. ಇನ್ನು ಹೆಸರಿಡಬೇಕಾದ ಈ ಸಿನೆಮಾ ಆಗಸ್ಟ್ 28 ರಿಂದ ಚಿತ್ರೀಕರಣ ಪ್ರಾರಂಭಿಸಲಿದೆ" ಎನ್ನುತ್ತಾರೆ.