ಎಂಟು ವರ್ಷಗಳಿಂದ ನೃತ್ಯ ತರಬೇತುದಾರನಾಗಿರುವ 26 ವರ್ಷದ ನಟ ಶರತ್ ಈಗ ಇಮ್ರಾನ್ ಅವರ ಎರಡನೇ ಚಿತ್ರ 'ಉಪ್ಪು ಹುಳಿ ಖಾರ' ಸಿನೆಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಲಿದ್ದಾರೆ. ಇವರು ಸಿನೆಮಾದಲ್ಲಿ ಅನುಶ್ರೀ ಎದುರು ನಟಿಸಲಿದ್ದು, ಧನು ಮತ್ತು ಶಶಿ ಜೊತೆಗೆ ಪ್ರಧಾನ ಪಾತ್ರದಲ್ಲಿರಲಿದ್ದಾರೆ. ಈ ಚಿತ್ರದಲ್ಲಿ ಹಿರಿಯ ನಟಿ ಮಾಲಾಶ್ರೀ ಕೂಡ ನಟಿಸುತ್ತಿರುವುದು ವಿಶೇಷ.