ನಿನ್ನೆ ಪತ್ನಿ ವಿಜಯಲಕ್ಷ್ಮಿ ಮನೆ ಬಳಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗಕ್ಕೆ ಪ್ರತಿಕ್ರಿಯೆ ನೀಡಿರುವ ದರ್ಶನ್, ನನ್ನ ಮಗನನ್ನು ನನ್ನಿಂದ ದೂರವಿಟ್ಟಿದ್ದಾರೆ. ಹೀಗಾಗಿ ನಾನು ನಿನ್ನೆ ನನ್ನ ಮಗನನ್ನು ನೋಡಲು ಹೋಗಿದ್ದೆ. ಮಗನನ್ನು ನೋಡಲು ಹೋಗಿದ್ದೆ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ ಎಂದು ದರ್ಶನ್ ಹೇಳಿರುವುದಾಗಿ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಮಾಧ್ಯಮಕ್ಕೆ ತಿಳಿಸಿದ್ದಾರೆ.