ಈ ವಿಷಯವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ ರಾ ಗೋವಿಂದು ಪ್ರತಿಕ್ರಿಯಿಸಿದ್ದು, "ಮಾಸ್ತಿಗುಡಿ ಚಿತ್ರದ ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ, ನಟ ದುನಿಯಾ ವಿಜಯ್, ನಿರ್ಮಾಪಕ ಸುಂದರ್ ಪಿ ಗೌಡ ಅವರು ಯಾವುದೇ ರೀತಿಯ ಸಿನಿಮಾ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಚಲನಚಿತ್ರ ವಾಣಿಜ್ಯ ಮಂಡಳಿ ತಡೆ ನೀಡಿದೆ" ಎಂದು ಹೇಳಿದ್ದಾರೆ.