ಭೂತಾಯಿ ಮಡಿಲು ಸೇರಿದ ಖಳನಟ ರಾಘವ್ ಉದಯ್

ಮಾಸ್ತಿಗುಡಿ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿಯ ಜಲಾಶಯಕ್ಕೆ ಹಾರಿ ಅಸುನೀಗಿದ್ದ ಖ್ಯಾತ ಖಳನಟ ರಾಘವ್ ಉದಯ್ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ...
ರಾಘವ್ ಉದಯ್
ರಾಘವ್ ಉದಯ್
ಬೆಂಗಳೂರು: ಮಾಸ್ತಿಗುಡಿ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿಯ ಜಲಾಶಯಕ್ಕೆ ಹಾರಿ ಅಸುನೀಗಿದ್ದ ಖ್ಯಾತ ಖಳನಟ ರಾಘವ್ ಉದಯ್ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿದೆ. 
ಬೆಂಗಳೂರಿನ ಬನಶಂಕರಿ ರುದ್ರಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ರಾಘವ್ ಉದಯ್ ಅವರ ಅಂತ್ಯಸಂಸ್ಕಾರ ನೆರವೇರಿತು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. 
ನಿನ್ನೆ ಮಧ್ಯಾಹ್ನ ಉದಯ್ ಅವರ ಮೃತದೇಹ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ನಿನ್ನೆ ರಾತ್ರಿ ಬೆಂಗಳೂರಿನ ಉದಯ್ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗಿದ್ದು ಅಂತಿಮ ದರ್ಶನಕ್ಕೆ ಅಣಿ ಮಾಡಲಾಗಿತ್ತು. 
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರವಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com