ಪವನ್ ಕಲ್ಯಾಣ್
ಸಿನಿಮಾ ಸುದ್ದಿ
2019 ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಪವನ್ ಕಲ್ಯಾಣ್ ಪ್ರಕಟಣೆ
2019 ರಲ್ಲಿ ನಡೆಯುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ...
ಅನಂತಪುರ: 2019 ರಲ್ಲಿ ನಡೆಯುವ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಪ್ರಕಟಿಸಿದ್ದಾರೆ.
ಗುರುವಾರ ಅನಂತಪುರದ ಸ್ಥಳೀಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ಆದರೆ ಶಾಸಕ ಅಥವಾ ಸಂಸದ ಸ್ಥಾನಕ್ಕೆ ಸ್ಪರ್ಧಿಸುತ್ತಾರೋ ಎಂಬುದನ್ನು ಸ್ಪಷ್ಟ ಪಡಿಸಿಲ್ಲ. ಜನಸೇನಾ ಪಕ್ಷದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ತೆಲುಗು ದೇಶಂ ಪಕ್ಷ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನಂತಪುರದಲ್ಲಿ ಶೀಘ್ರವೇ ಪಕ್ಷದ ಕಚೇರಿ ಆರಂಭಿಸುತ್ತೇನೆ ಎಂದು ಪವನ್ ಕಲ್ಯಾಣ್ ತಿಳಿಸಿದರು. ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪವನ್ ಕಲ್ಯಾಣ್ ಅಭಿಮಾನಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ