ಮಾಸ್ತಿ ಗುಡಿ ತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಖಳ ನಟರಾದ ಉದಯ್ ಹಾಗೂ ಅನಿಲ್ ಮೃತಪಟ್ಟಿದ್ದು, ಅವರೊಂದಿಗೆ ನೀರಿಗೆ ಹಾರಿದ್ದ ನಾಯಕ ನಟ ದುನಿಯಾ ವಿಜಯ್ ಅವರನ್ನು ರಕ್ಷಿಸಲಾಗಿತ್ತು. ಈ ಸಂಬಂಧ ಚಿತ್ರದ ನಿರ್ಮಾಪಕ ಸುಂದರ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ನಟ ದುನಿಯಾ ವಿಜಯ್ ಅವರ ಮೇಲೂ ಕ್ರಮ ಕೈಗೊಳ್ಳಬೇಕಿತ್ತೆಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ, ವಿಜಯ್ ಈಗ ಬೇರೊಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.