ಮಾಸ್ತಿ ಗುಡಿ ದುರಂತ: ಐವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಇಬ್ಬರು ನಟರನ್ನು ಬಲಿಪಡೆದ ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಚಿತ್ರದ ನಿರ್ಮಾಪಕ, ನಿರ್ದೇಶಕ, ಸಹ...
ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮಾ
ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮಾ
Updated on
ರಾಮನಗರ: ಇಬ್ಬರು ನಟರನ್ನು ಬಲಿಪಡೆದ ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಚಿತ್ರದ ನಿರ್ಮಾಪಕ, ನಿರ್ದೇಶಕ, ಸಹ ನಿರ್ದೇಶಕ, ಸಾಹಸ ನಿರ್ದೇಶಕ ಹಾಗೂ ಯುನಿಟ್ ಮ್ಯಾನೇಜರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 3ರ ವರೆಗೆ ವಿಸ್ತರಿಸಲಾಗಿದೆ.
ಮಾಸ್ತಿ ಗುಡಿ ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಿರ್ದೇಶಕ ನಾಗಶೇಖರ್‌, ಸಾಹಸ ನಿರ್ದೇಶಕ ರವಿವರ್ಮ, ಸಹ ನಿರ್ದೇಶಕ ಸಿದ್ದು, ನಿರ್ಮಾಪಕ ಸುಂದರ್ ಪಿ.ಗೌಡ ಹಾಗೂ ಯುನಿಟ್ ಮ್ಯಾನೇಜರ್ ಭರತ್ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಜೆಎಂಎಫ್‌ಸಿ ಕೋರ್ಟ್ ಗೆ ಹಾಜರುಪಡಿಸಲಾಯಿತು.
ಮಾಗಡಿ ತಾಲೂಕಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ರಾಮನಗರದ 3ನೇ ಹೆಚ್ಚುವರಿ ನ್ಯಾಯಾಧೀಶ ಗೋಪಾಲಕೃಷ್ಣ ಅವರು, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದ್ದಾರೆ. 
ಈ ಮಧ್ಯೆ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ನಾಳೆಗೆ ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com