ಈ ಧಾರಾವಾಹಿಯನ್ನು ಗಡ್ಡ ವಿಜಿ ನಿರ್ದೇಶಿಸಲಿದ್ದು, ಡ್ರಾಮಾ ಜೂನಿಯರ್ಸ್ ಗೆದ್ದ ಬಾಲ ನಟಿ ಚಿತ್ರಾಲಿ ಕೂಡ ನಟಿಸುತ್ತಿರುವುದು ವಿಶೇಷ. ಈ ಧಾರಾವಾಹಿಯ ಬಗ್ಗೆ ಹೆಚ್ಚು ವಿವರಗಳನ್ನು ತಂಡ ಬಹಿರಂಗಪಡಿಸಿಲ್ಲವಾದರೂ, ಸದ್ಯಕ್ಕೆ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ೨೦೦೭ ರ 'ಒಂದು ಪ್ರೀತಿಯ ಕಥೆ' ಸಿನೆಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಯಜ್ಞಾ ಶೆಟ್ಟಿ, 'ಎದ್ದೇಳು ಮಂಜುನಾಥ', 'ಸುಗ್ರೀವ', 'ಲವ್ ಗುರು', 'ಕಳ್ಳ ಮಳ್ಳ ಸುಳ್ಳ' ಮತ್ತು 'ಉಳಿದವರು ಕಂಡಂತೆ' ಸಿನೆಮಾಗಳಲ್ಲಿ ನಟಿಸಿದ್ದರು.