ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರ ಪ್ರದರ್ಶನ ಮಾಡದಿರಲು ವಿತರಕರು ನಿರ್ಧಾರ

ಶಾಂಕ್ ನಿರ್ದೇಶನದ ಮುಂಗಾರು ಮಳೆ-2 ಚಿತ್ರ ಇಂದು ದೇಶಾದ್ಯಂತ ತೆರಕಾಣುತ್ತಿದ್ದು ತಮಿಳುನಾಡಿನಲ್ಲಿ ಚಿತ್ರವನ್ನು ಪ್ರದರ್ಶನ ಮಾಡದಿರಲು ವಿತರಕರು...
ಮುಂಗಾರು ಮಳೆ-2
ಮುಂಗಾರು ಮಳೆ-2
ಬೆಂಗಳೂರು: ಶಶಾಂಕ್ ನಿರ್ದೇಶನದ ಮುಂಗಾರು ಮಳೆ-2 ಚಿತ್ರ ಇಂದು ದೇಶಾದ್ಯಂತ ತೆರಕಾಣುತ್ತಿದ್ದು ತಮಿಳುನಾಡಿನಲ್ಲಿ ಚಿತ್ರವನ್ನು ಪ್ರದರ್ಶನ ಮಾಡದಿರಲು ವಿತರಕರು ನಿರ್ಧರಿಸಿದ್ದಾರೆ. 
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರು, ಮತ್ತಷ್ಟು ಬಿಡುವಂತೆ ಇನ್ನಿಲ್ಲದಂತೆ ಒತ್ತಡ ಹಾಕುತ್ತಿರುವ ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರವನ್ನು ಇಂದು ಪ್ರದರ್ಶನ ಮಾಡದಿರಲು ವಿತರಕರು ತೀರ್ಮಾನಿಸಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಶಶಾಂಕ್ ಅವರು, ಕಾವೇರಿಗಾಗಿ ನಿನ್ನೆ ಕರ್ನಾಟಕ ಬಂದ್ ಮಾಡಲಾಗಿತ್ತು. ಇದಕ್ಕೆ ಹಲವು ಕನ್ನಡ ಪರ ಸಂಘಟನೆಗಳು, ಚಿತ್ರರಂಗ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿತರಕರು ಸ್ವಯಂ ಪ್ರೇರಿತರಾಗಿ ತಮಿಳುನಾಡಿನಲ್ಲಿ ಮುಂಗಾರು ಮಳೆ-2 ಚಿತ್ರವನ್ನು ಬಿಡುಗಡೆ ಮಾಡದಿರಲು ತೀರ್ಮಾನಿಸಿದ್ದಾರೆ ಎಂದರು. 
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಬಂದ್ ಹಿನ್ನೆಲೆ ಶುಕ್ರವಾರ ಬದಲಿಗೆ ಶನಿವಾರ ಬಿಡುಗಡೆಯಾಗುತ್ತಿದ್ದು, ಭರ್ಜರಿ ಟ್ರೈಲರ್ ಹಾಗೂ ಹಾಡುಗಳು ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com