ಕಾವೇರಿ ಗಲಾಟೆ: ಚೆನ್ನೈನಲ್ಲಿ ರಜನಿಕಾಂತ್, ಪ್ರಭುದೇವಾ ಸೇರಿ ಕನ್ನಡ ಮೂಲದ ನಟರಿಗೆ ಭದ್ರತೆ

ಕರ್ನಾಟಕದಲ್ಲಿ ಕಾವೇರಿ ವಿವಾದ ಹಿಂಸಾಚಾರ ರೂಪ ಪಡೆಯುತ್ತಿದ್ದಂತೆ ಅತ್ತ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡ ಮೂಲದ ನಟ ನಟಿಯರಿಗೆ ಜಯಲಲಿತಾ ಸರ್ಕಾರ ಸೂಕ್ತ...
ರಜನಿಕಾಂತ್, ಪ್ರಭುದೇವಾ
ರಜನಿಕಾಂತ್, ಪ್ರಭುದೇವಾ

ಚೆನ್ನೈ: ಕರ್ನಾಟಕದಲ್ಲಿ ಕಾವೇರಿ ವಿವಾದ ಹಿಂಸಾಚಾರ ರೂಪ ಪಡೆಯುತ್ತಿದ್ದಂತೆ ಅತ್ತ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡ ಮೂಲದ ನಟ ನಟಿಯರಿಗೆ ಜಯಲಲಿತಾ ಸರ್ಕಾರ ಸೂಕ್ತ ಭದ್ರತೆ ಒದಗಿಸಿದೆ.

ಚೆನ್ನೈನಲ್ಲಿ ನೆಲೆಸಿರುವ ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್, ಪ್ರಭುದೇವಾ ಸೇರಿದಂತೆ ಇನ್ನಿತರ ನಟ-ನಟಿಯರಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಗಳು  ನಡೆದಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಂ ಜಯಲಲಿತಾಗೆ ಪತ್ರ ಬರೆದು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com