ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ನಟಿ ರಾಖಿ ಸಾವಂತ್ ಬಂಧನಕ್ಕೆ ಆದೇಶ

ರಾಮಾಯಣ ರಚನಕಾಲ ವಾಲ್ಕೀಮಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ದ ಸ್ಥಳೀಯ ನ್ಯಾಯಾಲಯದವೊಂದು ಬಂಧನಾದೇಶವನ್ನು ಜಾರಿಗೊಳಿಸಿದೆ...
ಬಾಲಿವುಡ್ ನಟಿ ರಾಖಿ ಸಾವಂತ್
ಬಾಲಿವುಡ್ ನಟಿ ರಾಖಿ ಸಾವಂತ್
ಲುಧಿಯಾನ: ರಾಮಾಯಣ ರಚನಕಾಲ ವಾಲ್ಕೀಮಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ದ ಸ್ಥಳೀಯ ನ್ಯಾಯಾಲಯದವೊಂದು ಬಂಧನಾದೇಶವನ್ನು ಜಾರಿಗೊಳಿಸಿದೆ. 
ಕಳೆದ ವರ್ಷ ಖಾಸಗಿ ವಾಹನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಖಿ ಸಾವಂತ್ ಅವರು ವಾಲ್ಮೀಕಿ ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ ಹೇಳಿಕೆಯನ್ನು ನೀಡಿದ್ದರು ಎಂದು ದೂರು ದಾಖಲಾಗಿತ್ತು. 
ಆ ದೂರನ್ನು ಆಧರಿಸಿ ಮಾ.9 ರಂದು ನ್ಯಾಯಾಲಯದ ರಾಖಿ ಸಾವಂತ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ. ನ್ಯಾಯಾಲಯದ ಆದೇಶ ಹಿನ್ನಲೆಯಲ್ಲಿ ರಾಖಿ ಸಾವಂತ್ ಅವರನ್ನು ಬಂಧಿಸಲು ಬಂಧನಾದೇಶದೊಂದಿಗೆ ಇಬ್ಬರು ಪೊಲೀಸರು ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com