ವಿನೋದ್ ಖನ್ನಾ ಅವರ ಪುತ್ರ ರಾಹುಲ್ ಮಾತನಾಡಿ, ಮಾರ್ಚ್ 31 ರಂದು ನನ್ನ ತಂದೆ ತೀವ್ರ ನಿರ್ಜಲೀಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ಕರೆತಂದ ಬಳಿಕ ಅವರ ಆರೋಗ್ಯ ಸ್ಥಿತಿ ಸುಧಾರಿಸಿತು. ಇದೀಗ ಆವರ ಆರೋಗ್ಯ ಉತ್ತಮವಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ವೈದ್ಯರು ಹೇಳಿದ್ದಾರೆಂದು ಹೇಳಿದ್ದಾರೆ.