ಮಂಗಳೂರು: ಬಾಲಿವುಡ್ ನಟಿ ಐಶ್ವರ್ಯಾ ರೈ ಇಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಉಪ್ಪಿನಂಗಡಿಗೆ ಆಗಮಿಸಿ, ಇತ್ತೀಚೆಗೆ ನಿಧನರಾದ ತಮ್ಮ ತಂದೆ ಕೃಷ್ಣರಾಜ್ ರೈ ಅವರ ಅಸ್ಥಿ ವಿಸರ್ಜನೆ ಕಾರ್ಯದಲ್ಲಿ ಪಾಲ್ಗೊಂಡರು.
ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ತಮ್ಮ ಸಬೋದರ ಆದಿತ್ಯ ರೈ ಜೊತೆ ಶ್ರಾದ್ಧ ಕಾರ್ಯ ನೆರವೇರಿಸಿದರು. ತುಳುನಾಡಿನ ಸಂಪ್ರದಾಯದಂತೆ ಉಪ್ಪಿನಂಗಡಿಯ ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಕ್ಷೇತ್ರದಲ್ಲಿ ಅಸ್ಥಿ ವಿಸರ್ಜನೆ ಮಾಡಿದರು.
ಈ ವೇಳೆ ಪುತ್ರಿ ಆರಾಧ್ಯ, ತಾಯಿ ವೃಂದಾ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಮಾರ್ಚ್ 19 ರಂದು ಐಶ್ವರ್ಯಾ ರೈ ಅವರ ತಂದೆ ಕೃಷ್ಣ ರಾಜ್ ರೈ ಮುಂಬಯಿಯ ಲೀಲಾವತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.