`ರಾಜಕುಮಾರ’ನಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಇತ್ತೀಚಿಗಷ್ಟೆ ತೆರಕಂಡ ಪವರ್ ಸ್ಟಾರ್ ಪುನೀತ್‌ ರಾಜ್‌ ಕುಮಾರ್ ಅಭಿನಯದ `ರಾಜಕುಮಾರ’ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ...
ಚಿತ್ರತಂಡವನ್ನು ಅಭಿನಂದಿಸುತ್ತಿರುವ ಸಿಎಂ
ಚಿತ್ರತಂಡವನ್ನು ಅಭಿನಂದಿಸುತ್ತಿರುವ ಸಿಎಂ
ಬೆಂಗಳೂರು: ಇತ್ತೀಚಿಗಷ್ಟೆ ತೆರಕಂಡ ಪವರ್ ಸ್ಟಾರ್ ಪುನೀತ್‌ ರಾಜ್‌ ಕುಮಾರ್ ಅಭಿನಯದ `ರಾಜಕುಮಾರ’ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮನ್ನು ಭೇಟಿ ಚಿತ್ರ ತಂಡವನ್ನು ಅಭಿನಂದಿಸಿದ್ದಾರೆ.
ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ನಾಯಕ ನಟ ಪುನೀತ್‌ ರಾಜ್‌ ಕುಮಾರ್, ಚಿತ್ರದ ನಿರ್ದೇಶಕ ಆನಂದ್ ಸಂತೋಷ್ ರಾಮ್, ನಿರ್ಮಾಪಕ ವಿಜಯ್ ಕಿರಂಗದ್ದೂರು ಅವರನ್ನು ಸಿಎಂ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ರಾಜಕುಮಾರ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಚಿತ್ರ. ಇಂತಹ ಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.
ಇದಕ್ಕೆ ಪ್ರತಿಯಾಗಿ ಪುನೀತ್‌ರಾಜ್‌ಕುಮಾರ್, ಚುನಾವಣೆ ಸೇರಿದಂತೆ ಇನ್ನಿತರ ಕೆಲಸ-ಕಾರ್ಯದ ಒತ್ತಡದ ನಡುವೆಯೂ ರಾಜಕುಮಾರ ಚಿತ್ರ ನೋಡಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಸಿದ್ದರಾಮಯ್ಯ ಅವರು ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆಯ ಚುನಾವಣೆಯ ಜಂಜಾಟ, ಒತ್ತಡದ ನಡುವೆಯೂ ನಿನ್ನೆ ಬಿಡುವು ಮಾಡಿಕೊಂಡು ಮೈಸೂರಿನಲ್ಲಿ ರಾಜಕುಮಾರ ಚಿತ್ರ ವೀಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್‌ರಾಜ್‌ಕುಮಾರ್ ಹಾಗೂ ಅವರ ತಂಡವನ್ನು ಮನೆಗೆ ಕರೆಸಿಕೊಂಡು ಅಭಿನಂದಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com