ಇದೆ ವಿಷಯಕ್ಕೆ, ಎನ್ ಟಿ ಆರ್ ತಮ್ಮ ಮುಂದಿನ ಸಿನೆಮಾ 'ಜೈ ಲವ ಕುಶ' ಸಿನೆಮಾದಲ್ಲಿ ದುನಿಯಾ ವಿಜಯ್ ಅವರನ್ನು ತೊಡಗಿಸಿಕೊಳ್ಳಲು ಆಸಕ್ತಿ ತೋರಿದ್ದಾರಂತೆ. ಇದರಲ್ಲಿ ವಿಜಯ್ ಖಳನಾಯಕನ ಪಾತ್ರ ನಿರ್ವಹಿಸಲಿದ್ದಾರೆ. ವಿಜಯ್ ನಿಕಟವರ್ತಿಯೊಬ್ಬರು ಹೇಳುವಂತೆ "ಮೊದಲಿಗೆ ತೆಲುಗು ಸಿನೆಮಾದಲ್ಲಿ ನಟಿಸಲು ವಿಜಯ್ ಅವರಿಗೆ ಆಸಕ್ತಿ ಇರಲಿಲ್ಲ ಆದರೆ ಎನ್ ಟಿ ಆರ್ ವೈಯಕ್ತಿಕವಾಗಿ ಕರೆ ಮಾಡಿ, ಅವರ ದಕ್ಷತೆಯನ್ನು ಪ್ರಶಂಸಿಸಿ ತಮ್ಮ ಜೊತೆ ನಟಿಸಬೇಕು ಎಂದು ಕೇಳಿಕೊಂಡಾಗ ಇಲ್ಲ ಎಂದು ಹೇಳಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ವಿಜಯ್ ೧೫ ದಿನಗಳ ಸಮಯ ನೀಡಿದ್ದು, ಎರಡು ಮುಖ್ಯ ಆಕ್ಷನ್ ದೃಶ್ಯಗಳ ಭಾಗವಾಗಲಿದ್ದಾರೆ" ಎನ್ನುತ್ತಾರೆ.