ವಿಚಾರಣೆ ವೇಳೆ, ಈಗಾಗಲೇ ಸಾಕಷ್ಟು ಪ್ರಕರಣಗಳ ತನಿಖೆ ಪ್ರಗತಿಯಲ್ಲಿದ್ದು, ಕಲಾಭವನ್ ಮಣಿಯವರ ಪ್ರಕರಣವನ್ನು ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ರಾಜ್ಯ ಪೊಲೀಸರು ಸರಿಯಾದ ದಿಕ್ಕಿನಲ್ಲೇ ತನಿಖೆ ನಡೆಸುತ್ತಿದ್ದು. ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ಸಿಬಿಐ ಅಧಿಕಾರಿಗಳ ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ಪ್ರಕರಣವನ್ನು ತನಿಖೆ ನಡೆಸುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.