ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ನಿರ್ಮಾಪಕ ಉಮಾಪತಿ, ಸುದೀಪ್ ಅವರೊಂದಿಗೆ ಕೆಂಪೇಗೌಡ ೨ ಸಿನೆಮಾದಲ್ಲಿ ತೊಡಗಿಸಿಕೊಳ್ಳುತ್ತಿರುವುದಾಗಿ ಘೋಷಿಸಿದ್ದರು. 'ಹೆಬ್ಬುಲಿ' ನಂತರ ತಮ್ಮ ಸಹೋದರನೊಂದಿಗೆ ಕೆಲಸ ಮಾಡುತ್ತಿರುವುದಕ್ಕೆ ಖುಷಿ ತಂದಿದೆ ಎಂದು ಹೇಳಿಕೊಂಡಿದ್ದರು. ಆದರೆ ಈ ಹಿಂದೆ ಸುದೀಪ್ ನಟಿಸಿದ್ದ 'ಕೆಂಪೇಗೌಡ' ಸಿನೆಮಾದ ನಿರ್ಮಾಪಕ ಶಂಕ್ರೇ ಗೌಡ ಅವರೊಂದಿಗೆ ಇವೆಲ್ಲವೂ ಹೊಂದಾಣಿಕೆಯಾಗಿಲ್ಲ ಎಂದು ತಿಳಿದುವಂದಿದೆ.