ಬೆಂಗಳೂರು: ಎಂ ಎಸ್ ರಮೇಶ್ ನಿರ್ದೇಶಿಸುತ್ತಿರುವ ರವಿಚಂದ್ರನ್ ಮುಖ್ಯಭೂಮಿಕೆಯಲ್ಲಿರುವ 'ದಶರಥ' ಸಿನೆಮಾದ ಮೂಲಕ ಸುಮಾರು ೧೫ ವರ್ಷಗಳ ನಂತರ ನಟಿ ಸೋನಿಯಾ ಅಗರ್ವಾಲ್ ಕನ್ನಡ ಚಿತ್ರರಂಗಕ್ಕೆ ಹಿಂದಿರುಗಿದ್ದಾರೆ. ಅವರ ಕೊನೆಯ ಮತ್ತು ಒಂದೇ ಕನ್ನಡ ಚಿತ್ರ 'ಚಂದು' ೨೦೦೨ರಲ್ಲಿ ಬಿಡುಗಡೆಯಾಗಿತ್ತು. ಸದರಿ ಸಿನೆಮಾದಲ್ಲಿ ರವಿಚಂದ್ರನ್ ಪುತ್ರಿಯ ಪಾತ್ರದಲ್ಲಿ ಮೇಘಶ್ರೀ ಕೂಡ ನಟಿಸುತ್ತಿದ್ದು, ಪ್ರಿಯಾಮಣಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.