10 ದಿನಗಳ ಹಿಂದೆ ರವಿ ಅವರು ಪೊಲೀಸ್ ಆಯುಕ್ತರಾದ ಪರಮ್ ಬೀರ್ ಸಿಂಗ್ ಅವರನ್ನ ಭೇಟಿ ಮಾಡಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಸೇರಿದಂತೆ ಐವರ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 406 ಮತ್ತು 420ರ ಅಡಿಯಲ್ಲಿ ವಂಚನೆ ಕೇಸು ದಾಖಲಿಸಲಾಗಿದೆ ಎಂದು ಮುಂಬಯಿ ಪೊಲೀಸ್ ಆಯುಕ್ತ ಮನೋಜ್ ಪಾಟೀಲ್ ಹೇಳಿದ್ದಾರೆ.