ಬೆಂಗಳೂರು: ಗುರುನಂದನ್ ಅಭಿನಯದ "ರಾಜು ಕನ್ನಡ ಮೀಡಿಯಂ' ಚಿತ್ರ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಮೂಡಿಸಿದೆ.
ನರೇಶ್ ಕುಮಾರ್ ನಿರ್ದೇಶನದ ಸಿನಿಮಾದಲ್ಲಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.
"ರಾಜು ಕನ್ನಡ ಮೀಡಿಯಂ' ಚಿತ್ರದಲ್ಲಿ ಸುದೀಪ್ ಒಂದು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಇದೆ. ಆದರೆ, ಈ ವಿಷಯವನ್ನು ಚಿತ್ರತಂಡದವರಾಗಲೀ, ಸುದೀಪ್ ಅಥವಾ ಅವರ ಕಡೆಯವರಾಗಲೀ ಅಧಿಕೃತವಾಗಿ ಘೋಷಿಸಿಲ್ಲ.
ರಾಜು ಕನ್ನಡ ಮೀಡಿಯಂ ನಲ್ಲಿ ಹೇಗೆ ಸ್ಚಾರ್ ಗಳ ನಟನೆ ಹೇಗೆ ವರ್ಕೌಟ್ ಆಗಲಿದೆ ಎಂಬುದನ್ನು ಶೀಘ್ರವೇ ತೆರೆಯ ಮೇಲೆ ಕಾಣಬಹುದಾಗಿದೆ. ಸಿನಿಮಾದಲ್ಲಿ ಆವಂತಿಕಾ ಶೆಟ್ಟಿ, ಆಶಿಕಾ ರಂಗನಾಥ್ ನಟನೆಯಿದೆ. ಕಿರಣ್ ರವೀಂದ್ರ ನಾಥ್ ಸಿನಿಮಾಗೆ ಸಂಗೀತ ನೀಡಿದ್ದಾರೆ.