ಪರಪ್ಪನ ಅಗ್ರಹಾರ ಜೈಲು ಪ್ರಕರಣದ ಬಗ್ಗೆ ಮಾತ್ರ ಸಿನಿಮಾ ಮಾಡುವ ಉದ್ದೇಶವಿತ್ತು. ಆದರೆ ಅವರ ಜೀವನದ ಕೆಲ ವಿಷಯಗಳ ಬಗ್ಗೆ ಮಾಹಿತಿ ಅಗತ್ಯವಿತ್ತು, ಹೀಗಾಗಿ ಅವರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದೇನೆ ಎಂದು ರಮೇಶ್ ತಿಳಿಸಿದ್ದಾರೆ, ಸಿಐಡಿ ಅಧಿಕಾರಿ ಶರತ್ ಚಂದ್ರ ಸೇರಿದಂತೆ ಮತ್ತಿತ್ತರ ಅಧಿಕಾರಿಗಳನ್ನು ಭೇಟಿ ಮಾಡಿ ನಂತರ ಚಿತ್ರಕಥೆ ಬರೆಯುವುದಾಗಿ ಹೇಳಿದ್ದಾರೆ.