ಸ್ಯಾಂಡಲ್ ವುಡ್ ನ ಸ್ಟಾರ್ ನಟ ಸುದೀಪ್ ಇದೀಗ ಮತ್ತೊಮ್ಮೆ ಗಡಿದಾಟಿ ಬಾಲಿವುಡ್ ಮತ್ತು ಇತರ ದಕ್ಷಿಣ ಭಾರತ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ತೆಲುಗು ಮತ್ತು ಹಿಂದಿ ಚಿತ್ರ ನಿರ್ಮಾಪಕರಿಂದ ಸುದೀಪ್ ಗೆ ಅವಕಾಶಗಳು ಬರುತ್ತಿದ್ದು, ಸದ್ಯದ ಮಟ್ಟಿಗೆ ತೆಲುಗಿನಲ್ಲಿ ಚಿರಂಜೀವಿಯವರ 151ನೇ ಚಿತ್ರ ಉಯ್ಯಲವಾಡ ನರಸಿಂಹ ರೆಡ್ಡಿ ಚಿತ್ರದಲ್ಲಿ ನಟಿಸಲು ಸುದೀಪ್ ಒಪ್ಪಿಕೊಂಡಿದ್ದಾರೆ.