ಇನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಸುದೀಪ್, "ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿಯ ಸ್ಥಳವನ್ನು ಪುಣ್ಯಭೂಮಿ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ವಿಷ್ಣು ಸಮಾಧಿಯ 100 ಎಕರೆ ಜಾಗವನ್ನ ನಾವೇ ಖರೀದಿ ಮಾಡುತ್ತೇವೆ. ಸಮಾಧಿಯನ್ನು ಸ್ಥಳಾಂತರ ಮಾಡೋದು ಬೇಡ, ಸಮಾಧಿ ಜಾಗವನ್ನ ಪುಣ್ಯಭೂಮಿ ಅಂತಾ ಅಭಿವೃದ್ಧಿ ಮಾಡಿ ಎಂದು ಮನವಿ ಮಾಡಿದ್ದೇನೆ. ವಿಷ್ಣು ವರ್ಧನ್ ಅವರ ಪತ್ನಿ ಭಾರತಿ ಅವರ ಆಸೆಯಂತೆ ಇಲ್ಲಿ ಬದಲಾಗಿ ಸ್ಮಾರಕವನ್ನು ಮೈಸೂರಿನಲ್ಲಿ ಮಾಡಿದರೂ ನಮಗೆ ಬೇಸರವಿಲ್ಲ. ಆದರೆ ಸ್ಮಾರಕ ಕಾರ್ಯ ತಡವಾಗುವುದು ಬೇಡ.. ಈಗಾಗಲೇ 8 ವರ್ಷಗಳಾದರೂ ವಿಷ್ಣು ಸ್ಮಾರಕ ಯೋಜನೆ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಈ ಬಗ್ಗೆ ಸಿಎಂ ಸಿದ್ಗರಾಮಯ್ಯ ಅವರಿಗೆ ಮನವಿ ಮಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಜೊತೆಗೆ ಪುಣ್ಯಭೂಮಿ ಮಾಡಿಕೊಡೋದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಸುದೀಪ್ ಹೇಳಿದರು.