ಬೆಂಗಳೂರು: 'ರಿಕ್ಕಿ', 'ಕಿರಿಕ್ ಪಾರ್ಟಿ' ಖ್ಯಾತಿಯ ರಿಷಬ್ ಶೆಟ್ಟಿ ಇದೀಗ ವಿಭಿನ್ನವಾಗಿ ಆಲೋಚಿಸಿದ್ದಾರೆ. ಅವರು ಮಕ್ಕಳ ಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದು 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಕೊಡುಗೆ ರಾಮಣ್ಣ ರೈ' ಎನ್ನುವ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದಾಗಲೇ ಐವತ್ತೈದು ದಿನ ಚಿತ್ರೀಕರಣ ಪೂರೈಸಿದ ಈ ಚಿತ್ರದ ಬಗೆಗೆ ಅವರು ಎಕ್ಸ್ ಪ್ರೆಸ್ ನೊಡನೆ ಮಾತನಾಡಿದ್ದಾರೆ.