ನಿನ್ನೆಯಷ್ಟೇ ನಟ ಶಂಕರ್ ಅಶ್ವತ್ ಅವರು ಕ್ಯಾಬ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಈ ಸುದ್ದಿ ಬೆನ್ನಲ್ಲೇ ನಟ ಶಂಕರ್ ಅಪರ ಸ್ಥಿತಿಗೆ ಮರುಕ ವ್ಯಕ್ತಪಡಿಸಿದ್ದ ನಟ ಜಗ್ಗೇಶ್ ಅವರು ಒಂದು ಲಕ್ಷ ನೆರವಿನ ಘೋಷಣೆ ಮಾಡಿದ್ದರು. ಅಲ್ಲದೆ ಶಂಕರ್ ಅಶ್ವಥ್ ಅವರಿಗೆ ಕೆಲಸ ಕೂಡ ನೀಡುವ ಸಂಬಂಧ ಭರವಸೆ ನೀಡಿದ್ದರುಯ. ಈ ಬೆಳವಣಿಗೆ ಬೆನ್ನಲ್ಲೇ ನಟ ಪ್ರಥಮ್ ಶಂಕರ್ ಅಶ್ವಥ್ ಅವರಿಗೆ ಸಿನಿಮಾ ಆಫರ್ ವೊಂದನ್ನು ನೀಡಿದ್ದು, ತಮ್ಮ ಮುಂದಿನ ಚಿತ್ರದಲ್ಲಿ ಶಂಕರ್ ಅಶ್ವಥ್ ಅವರಿಗೆ ಪಾತ್ರವೊಂದನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.