ವಿನಯ್ ರಾಜ್ ಕುಮಾರ್ ಮುಂದಿನ ಚಿತ್ರಕ್ಕೆ ಪವನ್ ಒಡೆಯರ್ ಸಿದ್ಧತೆ

ರಘು ಶಾಸ್ತ್ರಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ರನ್ ಆ್ಯಂಟನಿ ಬಿಡುಗಡೆಯಾಗಿ ಸುಮಾರು ಆರು ತಿಂಗಳುಗಳೇ ಕಳೆದಿವೆ. ಕಮರ್ಷಿಯಲ್ ಹಿಟ್ ಚಿತ್ರದಲ್ಲಿ...
ವಿನಯ್ ರಾಜ್ ಮತ್ತು ಪವನ್ ಒಡೆಯರ್
ವಿನಯ್ ರಾಜ್ ಮತ್ತು ಪವನ್ ಒಡೆಯರ್
Updated on

ಬೆಂಗಳೂರು: ರಘು ಶಾಸ್ತ್ರಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ರನ್ ಆ್ಯಂಟನಿ ಬಿಡುಗಡೆಯಾಗಿ ಸುಮಾರು ಆರು ತಿಂಗಳುಗಳೇ ಕಳೆದಿವೆ. ಕಮರ್ಷಿಯಲ್ ಹಿಟ್ ಚಿತ್ರದಲ್ಲಿ ನಟಿಸಲು ಮನಸ್ಸು ಮಾಡಿರುವ ವಿನಯ್ ರಾಜ್ ಮುಂದಿನ ಮೂರನೇ ಚಿತ್ರಕ್ಕಾಗಿ ನಿರ್ದೇಶಕ ಪವನ್ ಒಡೆಯರ್ ಚಿತ್ರಕಥೆ ಬರೆಯುತ್ತಿದ್ದಾರೆ.

ಏಪ್ರಿಲ್ 24 ರಂದು ಡಾ. ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು, ಅಂದಿನಿಂದಲೇ ಸಿನಿಮಾ ಶೂಟಿಂಗ್ ಆರಂಭಿಸಲು ಪವನ್ ಒಡೆಯರ್ ಚಿತ್ರಕಥೆ ಬರೆಯುತ್ತಿದ್ದಾರೆ ಎನ್ನಲಾಗಿದೆ.

ವಿನಯ್ ರಾಜ್ ಕುಮಾರ್ ಅವರ ಮುಂದಿನ ಕಮರ್ಷಿಯಲ್ ಚಿತ್ರಕ್ಕಾಗಿ ಪವನ್ ಒಡೆಯರ್ ಚಿತ್ರಕಥೆ ಬರೆಯುತ್ತಿದ್ದು, ವಿನಯ್ ತಂದೆ ರಾಘವೇಂದ್ರ ರಾಜ್ ಕುಮಾರ್ ಕೂಡ ಕಥೆಗೆ ಓಕೆ ಹೇಳಿದ್ದಾರೆ.

ಡಾ. ರಾಜ್ ಕುಮಾರ್ ಅವರ ಮೊಮ್ಮಗನಾಗಿರುವ ವಿನಯ್ ರಾಜ್ ಕುಮಾಪ್ ಪ್ರಕಾಶ್ ಜಯರಾಮ್  ನಿರ್ದೇಶನದ ಸಿದ್ದಾರ್ಥ ಮೊದಲ ಚಿತ್ರವಾಗಿತ್ತು, ಅದಾದ ನಂತರ ಮುಂಬಯಿಯ ಅನುಪಮ್ ಖೇರ್  ನಟನಾ ಶಾಲೆಯಲ್ಲಿ ತರಬೇತಿ ಪಡೆದ ವಿನಯ್ ರನ್ ಆ್ಯಂಟನಿ ಚಿತ್ರದಲ್ಲಿ ನಟಿಸಿದ್ದರು.

ಗೋವಿಂದಾಯ ನಮ,  ರಣ ವಿಕ್ರಮ, ಗೂಗ್ಲಿ ಸಿನಿಮಾ ನಿರ್ದೇಶಿಸಿರುವ ಪವನ್ ಒಡೆಯರ್ ವಿನಯ್ ಹೊಸ ಅವತಾರಕ್ಕಾಗಿ ಚಿತ್ರಕಥೆ ಬರೆಯಲು ಎಲ್ಲಾ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಬಗ್ಗೆ ನಟನಾಗಲೀ ನಿರ್ದೇಶಕರಾಗಲೀ ಎಲ್ಲಿಯೂ ಅಧಿಕೃತವಾಗಿ ಇನ್ನೂ ಪ್ರಕಟಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com