ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ನಿರ್ದೇಶನ ತರಬೇತಿ ಪಡೆದಿದ್ದ ಅಕ್ಷರ ತಮಿಳಿನ 'ಉಯರಿತಿರು ೪೨೦' ಸಿನೆಮಾದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿ, 'ರಂಗ್ರೆಜ್' ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. 'ತುಫಾಕಿ', 'ಇರಂಬು ಕೂತಿರೈ' ಸಿನೆಮಾಗಳಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದ ನಟಿ, ತಮ್ಮ ಮುಂದಿನ ಸಿನೆಮಾ 'ಭೋಗನ್' ಎದುರುನೋಡುತ್ತಿದ್ದಾರೆ. ಪ್ರಭುದೇವ ಮತ್ತು ಡಾ. ಕೆ ಗಣೇಶ್ ನಿರ್ಮಾಣದ ಈ ಚಿತ್ರದಲ್ಲಿ, ಜಯಂ ರವಿ, ಹಂಸಿಕಾ ಮೋಟ್ವಾನಿ ಮತ್ತು ಅರವಿಂದ್ ಸ್ವಾಮಿ ನಟಿಸುತ್ತಿದ್ದಾರೆ. ಅಲ್ಲದೆ 'ಮಾಯಾವನ್' ಮತ್ತು 'ಸಂಗಿಲಿ ಬುಂಗಿಲಿ ಕಧ್ ಆವಾ ತೊರೆ' ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.