ಕನ್ನಡಿಗರಲ್ಲಿ ಒಗ್ಗಟ್ಟಿನ ಕೊರತೆ; ಕಂಬಳ ಬೆಂಬಲಿಸಿ ನಟ ಜಗ್ಗೇಶ್ ಟ್ವೀಟ್

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಪ್ರಾದಾಯಿಕ ಕ್ರೀಡೆಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡದ ಸತಾತನ ಗ್ರಾಮೀಣ ಕ್ರೀಡೆ 'ಕಂಬಳ'ದ ಪರವಾಗಿ ದನಿ ಆರಂಭವಾಗತೊಡಗಿದೆ...
ನವರಸ ನಾಯಕ ಜಗ್ಗೇಶ್
ನವರಸ ನಾಯಕ ಜಗ್ಗೇಶ್

ಬೆಂಗಳೂರು: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಪ್ರಾದಾಯಿಕ ಕ್ರೀಡೆಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡದ ಸತಾತನ ಗ್ರಾಮೀಣ ಕ್ರೀಡೆ 'ಕಂಬಳ'ದ ಪರವಾಗಿ ದನಿ ಆರಂಭವಾಗತೊಡಗಿದೆ.

ನವರಸ ನಾಯಕ ಜಗ್ಗೇಶ್ ಅವರು ಕಂಬಳ ಪರವಾಗಿ ಮಾತನಾಡಿದ್ದು, ರಾಜ್ಯದ ಗ್ರಾಮೀಣ ಕ್ರೀಡೆಯಾಗಿರುವ ಕಂಬಳದ ಪರ ಒಗ್ಗೂಡಿ ದನಿ ಎತ್ತರ ಕನ್ನಡಿಗರ ಕುರಿತಂತೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಕಂಬಳ ಗ್ರಾಮೀಣ ಕ್ರೀಡೆ ಕುರಿತಂತೆ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಜಗ್ಗೇಶ್ ಅವರು, ಯಾಕೆ? ತಿಲಾಂಜಲಿ! ಜಲ್ಲಿಕಟ್ಟುವಿನಂತೆ ಕಂಬಳ ಕೂಡ ನಮ್ಮ ದಕ್ಷಿಣ ಕರ್ನಾಟಕದ ಸನಾತನ ಕ್ರೀಡೆಯಾಗಿದ್ದು, ತಮಿಳರಂತೆ ಕನ್ನಡಿಗರೂ ಒಗ್ಗಟ್ಟಿನ ಮಂತ್ರಿ ಜಪಿಸಬೇಕಿದೆ. ಇದಕ್ಕೆ ಕನ್ನಡಿಗರು ಕೈಜೋಡಿಸಬೇಕು. ಇಡೀ ವಿಶ್ವದ ಕನ್ನಡಿಗರೂ ಒಂದಾಗಬೇಕಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com