ಬೆಂಗಳೂರು: ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿ, ಪ್ರಧಾನ ಪಾತ್ರದಲ್ಲಿ ನಟಿಸಿರುವ 'ಒಂದು ಮೊಟ್ಟೆಯ ಕಥೆ' ಸಿನೆಮಾ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಈ ಶುಕ್ರವಾರ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನೆಮಾ ಮೂಲಕ ತಮ್ಮ ಜೀವನವನ್ನು ಇನ್ನಷ್ಟು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಯಿತು ಎನ್ನುವ ರಾಜ್, ಈ ಸಿನೆಮಾ ಮಾಡಲು ಸಿಕ್ಕ ಸ್ಫೂರ್ತಿ ಮತ್ತು ಈ ಸಿನೆಮಾವನ್ನು ಜಾಗತಿಕ ಪರ್ಯಟನ ಮಾಡಿಸುತ್ತಿರುವ ನಿರ್ದೇಶಕ ಪವನ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ.