ನಾನು ರಾಜಕೀಯಕ್ಕೆ ಬರುತ್ತೇನೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ ಶಿವರಾಜ್ ಕುಮಾರ್, ಅಮ್ಮನ ಬಗ್ಗೆ ಅಭಿಮಾನವಿದ್ದ ಕಾರಣ ರಾಹುಲ್ ಗಾಂಧಿ ನಮಗೆ ಸಾಂತ್ವನ ಹೇಳಲು ನಮ್ಮ ಮನೆಗೆ ಬಂದಿದ್ದರು. ರಾಹುಲ್ ಗಾಂಧಿ ನಮ್ಮ ಮನೆಗೆ ಬಂದಿದ್ದರು ಎಂದಾಕ್ಷಣ ಶಿವರಾಜ್ಕುಮಾರ್ ರಾಜಕಾರಣಕ್ಕೆ ಬರುತ್ತಾರೆ ಎನ್ನುವುದು ಸರಿಯಲ್ಲ. ನಾನು ಕಾಂಗ್ರೆಸ್ ಸೇರುತ್ತೇನೆ ಎಂಬ ಉಹಾಪೋಹಗಳೂ ಸುಳ್ಳು ಎಂದು ಸ್ಪಷ್ಟಪಡಿಸಿದರು.