ಚೀನಾ ವಸ್ತು ನಿಷೇಧಿಸಿ, ಯೋಧರಿಗಾಗಿ ಭಾರತ್ ಬಂದ್ ಮಾಡಿ: ಟ್ವಿಟ್ಟರ್ ನಲ್ಲಿ ಉಪೇಂದ್ರ ಕರೆ

ದೇಶದಲ್ಲಿ ಪ್ರತಿನಿತ್ಯ ನಡೆಯುವ ಹಲವು ಬೆಳವಣಿಗೆಗಳ ಬಗ್ಗೆ ಟ್ವೀಟ್ ಮಾಡುವ ಮೂಲಕ ಗಮನ ಸೆಳೆಯುವ ರಿಯಲ್ ಸ್ಟಾರ್ ಉಪೇಂದ್ರ,...
ಉಪೇಂದ್ರ
ಉಪೇಂದ್ರ
Updated on
ಬೆಂಗಳೂರು: ದೇಶದಲ್ಲಿ ಪ್ರತಿನಿತ್ಯ ನಡೆಯುವ ಹಲವು ಬೆಳವಣಿಗೆಗಳ ಬಗ್ಗೆ ಟ್ವೀಟ್ ಮಾಡುವ ಮೂಲಕ ಗಮನ ಸೆಳೆಯುವ ರಿಯಲ್ ಸ್ಟಾರ್ ಉಪೇಂದ್ರ, ಭಾರತ್ ಬಂದ್ ನಡೆಸುವ ಮೂಲಕ ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲಲು ಕರೆ ನೀಡಿದ್ದಾರೆ
ಈ ಸಂಬಂಧ ಟ್ವೀಟ್ ಮಾಡಿರುವ ರಿಯಲ್ ಸ್ಟಾರ್ ,ಚೀನಾ ವಿರುದ್ಧ ಭಾರತ್ ಬಂದ್ ನಡೆಸುವಂತೆ ದೇಶದ ಜನತೆಗೆ ಕರೆಕೊಟ್ಟಿದ್ದಾರೆ. ನಾವು ಬಂದ್'ಗಳಿಗೆ ಹೆಸರಾದವರು. ಸುಮ್ಮ ಸುಮ್ಮನೆ ಬಂದ್ ಮಾಡುತ್ತೇವೆ. ನಮ್ಮ ಸೈನಿಕರಿಗೆ ಬೆಂಬಲ ನೀಡಲು ಮತ್ತು ಚೀನಾಗೆ ಎಚ್ಚರಿಕೆ ನೀಡಲು ನಾವೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ಬೀದಿಗೆ ಇಳಿದು ಭಾರತ್ ಬಂದ್ ಯಾಕೆ ಆಚರಿಸಬಾರದು ಎಂದು ರಿಯಲ್ ಸ್ಟಾರ್ ಪ್ರಶ್ನಿಸಿದ್ದಾರೆ.
ಸಿಕ್ಕಿಂ ಗಡಿಯಲ್ಲಿ ಭಾರತೀಯ ಸೈನಿಕರು ಚೀನಾದಿಂದ ಯುದ್ಧದ ಅಪಾಯದಲ್ಲಿದ್ದರೂ ದೇಶದ ಜನರು ಚಿಕ್ಕಪುಟ್ಟ ವಿಷಯಗಳಿಗೆ ಕಿತ್ತಾಟ ನಡೆಸುತ್ತಿದ್ದಾರೆಂದು ಉಪೇಂದ್ರ ಟ್ವೀಟ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. 
ಆಳುವುದಕ್ಕೆ ನಾವು ಯೋಗ್ಯರಲ್ಲ, ಆಳಿಸಿಕೊಳ್ಳುವುದಕ್ಕೆ ಲಾಯಕ್ಕು ಎಂದು ಕಿಡಿಕಾರಿದ್ದಾರೆ. ಇಸ್ರೇಲ್ ದೇಶದಿಂದ ಕಲಿಯುವುದು ಬಹಳಷ್ಟಿದೆ ಎಂದೂ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಸಿಕ್ಕಿಂ ನಲ್ಲಿ ನಮ್ಮ ಸೈನಿಕರಿಗೆ ಬೆದರಿಕೆ ಹಾಕುತ್ತಿರುವ ಚೀನಾ ವಿರುದ್ಧ ನಾವೆಲ್ಲರೂ ಹೋರಾಡೋಣ ಎಂದು ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com