ಪುನೀತ್ ರಾಜ್ ಕುಮಾರ್ ಅಭಿನಯದ ನಿನ್ನಿಂದಲೇ ಸಿನಿಮಾ ಮೂಲಕ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಆರಂಭಿಸಿತು, ಅದಾದ ನಂತರ ಯಶ್ ಅಭಿನಯದ ಮಾಸ್ಟರ್ ಪೀಸ್, ಮೂರನೇ ಸಿನಿಮಾ ರಾಜಕುಮಾರ ಮತ್ತು ಯಶ್ ಅಭಿನಯದ ಕೆಜಿಎಫ್ ಸಿನಿಮಾ ನಿರ್ಮಿಸುತ್ತಿದೆ. ಈಗ ಕೇಳಿ ಬರುತ್ತಿರುವ ಹೊಸ ಸುದ್ದಿಯೇನೆಂದರೇ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣದ ಮುಂದಿನ ಸಿನಿಮಾದಲ್ಲಿ ಸುದೀಪ್ ನಾಯಕರಾಗಲಿದ್ದಾರೆ ಇದಕ್ಕೆ ಸುದೀಪ್ ಕೂಡ ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.