'ರಾಜಕುಮಾರ' ಸೂಪರ್ ಹಿಟ್ ನಂತರ, ಹೊಂಬಾಳೆ ಫಿಲ್ಮ್ಸ್ ಮುಂದಿನ ಚಿತ್ರಕ್ಕೆ ಸುದೀಪ್ ನಾಯಕ

ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ ರಾಜಕುಮಾರ ಈ ವರ್ಷದ ಬ್ಲಾಕ್ ಬಸ್ಟರ್ ಸಿನಿಮಾವಾಗಿದೆ. ಪುನೀತ್ ಅಭಿನಯದ ಈ ಚಿತ್ರವನ್ನು ..
ಸುದೀಪ್
ಸುದೀಪ್
ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ 'ರಾಜಕುಮಾರ' ಈ ವರ್ಷದ ಬ್ಲಾಕ್ ಬಸ್ಟರ್ ಸಿನಿಮಾವಾಗಿದೆ. ಪುನೀತ್ ಅಭಿನಯದ ಈ ಚಿತ್ರವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದರು. ರಾಜಕುಮಾರ ಸಿನಿಮಾ ಕನ್ನಡ ಪ್ರೇಕ್ಷಕರ ಮೇಲೆ ಉತ್ತಮ ಪರಿಣಾಮ ಬೀರಿತ್ತು. ಈ ಸಿನಿಮಾವನ್ನು ತೆಲುಗಿನಲ್ಲಿಯೂ ನಿರ್ಮಾಣ ಮಾಡಲಾಗುತ್ತಿದೆ.
ಪುನೀತ್ ರಾಜ್ ಕುಮಾರ್ ಅಭಿನಯದ ನಿನ್ನಿಂದಲೇ ಸಿನಿಮಾ ಮೂಲಕ ಹೊಂಬಾಳೆ ಫಿಲ್ಮ್ಸ್ ನಿರ್ಮಾಣ  ಆರಂಭಿಸಿತು, ಅದಾದ ನಂತರ ಯಶ್ ಅಭಿನಯದ ಮಾಸ್ಟರ್ ಪೀಸ್, ಮೂರನೇ ಸಿನಿಮಾ ರಾಜಕುಮಾರ ಮತ್ತು ಯಶ್ ಅಭಿನಯದ ಕೆಜಿಎಫ್ ಸಿನಿಮಾ ನಿರ್ಮಿಸುತ್ತಿದೆ. ಈಗ ಕೇಳಿ ಬರುತ್ತಿರುವ ಹೊಸ ಸುದ್ದಿಯೇನೆಂದರೇ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣದ ಮುಂದಿನ ಸಿನಿಮಾದಲ್ಲಿ ಸುದೀಪ್ ನಾಯಕರಾಗಲಿದ್ದಾರೆ ಇದಕ್ಕೆ ಸುದೀಪ್ ಕೂಡ ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ಸಿನಿಮಾ ಬಗ್ಗೆ ಸುದೀಪ್ ಜೊತೆ ಈಗಾಗಲೇ ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಮುಂದಿನ ವರ್ಷದ ಆರಂಭದಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ. ಈ ಸಿನಿಮಾಗೆ ಎಸ್. ಕೃಷ್ಣ ನಿರ್ದೇಶನ ಮಾಡಲಿದ್ದಾರೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಕುತೂಹಲಭರಿತರಾಗಿದ್ದಾರೆ. ಸತತ ಹಿಟ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲ್ಮ್ಸ್  ಈ ಬಗ್ಗೆ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. 
ಸದ್ಯ ಸುದೀಪ್  ಪ್ರೇಮ್ ನಿರ್ದೇಶನದ  ವಿಲ್ಲನ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com