ಕೊಲೆ ಯತ್ನ ಪ್ರಕರಣ: 'ಸ್ಟೈಲ್ ರಾಜ' ಚಿತ್ರದ ನಿರ್ದೇಶಕ ಸೇರಿ ನಾಲ್ವರ ಬಂಧನ

ಕೊಲೆ ಯತ್ನ ಹಾಗೂ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ 'ಸ್ಟೈಲ್​ ರಾಜ' ಚಿತ್ರದ ನಿರ್ದೇಶಕ ಹರೀಶ್ ಸೇರಿದಂತೆ...
ಹರೀಶ್
ಹರೀಶ್
ಬೆಂಗಳೂರು: ಕೊಲೆ ಯತ್ನ ಹಾಗೂ ಕೊಲೆ ಸಂಚು ರೂಪಿಸಿದ ಆರೋಪದ ಮೇಲೆ 'ಸ್ಟೈಲ್​ ರಾಜ' ಚಿತ್ರದ ನಿರ್ದೇಶಕ ಹರೀಶ್ ಸೇರಿದಂತೆ ನಾಲ್ವರನ್ನ ಸಿಸಿಬಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಚಿತ್ರಕ್ಕಾಗಿ ಹಣ ನೀಡಿದ್ದ ಅಶೋಕ್ ಎಂಬುವವರನ್ನು ಕೊಲೆ ಮಾಡಲು ಯತ್ನಿಸಿದ ಹಾಗೂ ಕೊಲೆಗೆ ಸುಪಾರಿ ಕೊಟ್ಟ ಆರೋಪದ ಮೇಲೆ ಸಿನಿಮಾ ನಿರ್ದೇಶಕ ಹರೀಶ್,  ರಾಜಶೇಖರ್, ಸತೀಶ್​ ಹಾಗೂ ಸುರೇಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಅಶೋಕ್ ಅವರ ಸಂಬಂಧಿಕರ ಬಳಿ ನಿರ್ದೇಶಕ ಹರೀಶ್ ತಮ್ಮ ಚಿತ್ರದ ಕೆಲಸಗಳಿಗಾಗಿ 3.5 ಲಕ್ಷ ಹಣವನ್ನು ಪಡೆದಿದ್ದರಂತೆ. ಸಿನಿಮಾ ಬಿಡುಗಡೆಯಾದರು, ಹಣ ಮಾತ್ರ ಪಾವತಿಸಿರಲಿಲ್ಲ. ಹಣ ಕೇಳಿದರೆ ತಪ್ಪಿಸಿಕೊಂಡು ತಿರುಗುತ್ತಿದ್ದನು. ಹೀಗಾಗಿ, ಹಣಕ್ಕಾಗಿ ಪೀಡಿಸುತ್ತಿದ್ದ ಅಶೋಕ್ ಅವರನ್ನ ಸುಪಾರಿ ಕೊಟ್ಟು ಕೊಲೆ ಮಾಡುವುದಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ.
ಇತ್ತೀಚೆಗೆ ರೌಡಿ ಸತೀಶ್ ಮತ್ತು ಅವರ ತಂಡ ಅಶೋಕ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್​ ಆಗಿದ್ದರು. ಈ ಸಂಬಂಧ ಅಶೋಕ್ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದು ನಾಲ್ವರನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com