ಸಿನಿಮಾ ರಂಗದಲ್ಲಿ ಇತರೆ ಹೆಣ್ಣು ಮಕ್ಕಳಂತೆ ಇಂದು ನಾನು ಕೂಡ ಸಂತ್ರಸ್ತೆಯಾಗಿದ್ದೇನೆ. ಚಿತ್ರರಂಗದಲ್ಲಿ ಉನ್ನತ ವ್ಯಕ್ತಿಗಳೊಂದಿಗೆ ನಾನು ಕೆಲಸ ಮಾಡಿದ್ದೇನೆ. ಮಿ.ಅನೂಪ್ ಭಂಡಾರಿ, ರಂಗಿತರಂಗ ಚಿತ್ರದ ತಂಡ, ರಾಜರಥ ಚಿತ್ರ ತಂಡ ಸೇರಿದಂತೆ ಸೂಪರ್ ಸ್ಟಾರ್ ನಟ ಉಪೇಂದ್ರ ಅವರೊಂದಿಗೆ ನಾನು ಕೆಲಸ ಮಾಡಿದ್ದೇನೆ. ಎಲ್ಲರೊಂದಿಗೂ ಉತ್ತಮ ರೀತಿ ಬಾಂಧವ್ಯವಿತ್ತು. ಎಲ್ಲರ ಮೇಲೂ ನನಗೆ ಅಪಾರವಾದ ಗೌರವವಿದೆ. ಆದರೆ, ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಿರ್ಮಾಪಕ ಕೆ ಸುರೇಶ್ ಅವರೊಂದಿಗೆ ಕೆಲಸ ಮಾಡಿದ ಅನುಭವವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.